'ನಮ್ಮ ಬೇಡಿಕೆ ಈಡೇರುವವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಎದುರು ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದೆವು. ಈ ಸಂಬಂಧ ಮಂಗಳವಾರ ನಗರ ಪೊಲೀಸ್ ಠಾಣೆಗೆ ಅನುಮತಿಗಾಗಿ ಮನವಿ ಸಲ್ಲಿಸಿದ್ದೆವು. ಆದರೆ ಪೊಲೀಸರು ಅನುಮತಿ ನೀಡದೆ, ಪ್ರತಿಭಟಿಸುವ ನಮ್ಮ ಹಕ್ಕನ್ನು ನಿರಾಕರಿಸಿದ್ದಾರೆ’ ಎಂದು ಸಾರಿಗೆ ನೌಕರರ ಒಕ್ಕೂಟದ ರಾಜೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.