<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಊಟಿ–ಮೈಸೂರು ಹೆದ್ದಾರಿಯ ಮೇಲುಕಾಮನಹಳ್ಳಿ ಚೆಕ್ಪೋಸ್ಟ್ ಬಳಿ ಶುಕ್ರವಾರ ಬೆಳಗಿನ ಜಾವ ಕೆಎಸ್ಆರ್ಟಿಸಿಯ ‘ಐರಾವತ’ (ವೋಲ್ವೊ ಬಸ್) ತಳಭಾಗಕ್ಕೆ ಕಬ್ಬಿಣದ ಪಟ್ಟಿ ತಗುಲಿ ಮುಂದೆ ಚಲಿಸಲು ಸಾಧ್ಯವಾಗದೇ ಇದ್ದುದರಿಂದ ಬೆಳಿಗ್ಗೆ ವಾಹನ ದಟ್ಟಣೆ ಉಂಟಾಯಿತು.</p>.<p>ಬಸ್ ಬೆಂಗಳೂರಿನಿಂದ ಊಟಿಗೆ ತೆರಳುತ್ತಿತ್ತು. ಚೆಕ್ಪೋಸ್ಟ್ನ ಗೇಟನ್ನು ಹಾಕಿ ತೆಗೆಯಲು ಅಳವಡಿಸಿರುವ ಕಬ್ಬಿಣದ ಪಟ್ಟಿ ಎರಡು ದಿನಗಳ ಹಿಂದೆ, ಭಾರಿ ತೂಕದ ಲಾರಿ ಸಂಚಾರದಿಂದ ತುಂಡಾಗಿತ್ತು. ಶುಕ್ರವಾರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಐರಾವತ ಬಸ್ ಸಾಗುವಾಗ, ಪಟ್ಟಿ ಬಸ್ ತಳಕ್ಕೆ ತಗುಲಿ ಮುಂದೆ ಚಲಿಸಲು ಆಗದೇ ರಸ್ತೆಯ ಮಧ್ಯದಲ್ಲಿ ಸಿಕ್ಕಿ ಹಾಕಿಕೊಂಡಿತು.</p>.<p>ಬಂಡೀಪುರ ಅರಣ್ಯದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಮೂರು ಸಾರಿಗೆ ಬಸ್ಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇದೆ.</p>.<p>ಬಸ್ ರಸ್ತೆಯ ಮಧ್ಯದಲ್ಲೇ ಇದ್ದುದರಿಂದ ಬೆಳಿಗ್ಗೆ 6 ಗಂಟೆಯ ನಂತರ ಅಂತರರಾಜ್ಯ ನಡುವೆ ಸಂಚರಿಸುವ ವಾಹನಗಳಿಗೂ ಹೋಗಲು ಆಗಲಿಲ್ಲ. ಎರಡು ಕಿ.ಮೀ ದೂರದವರೆಗೆ ವಾಹನ ದಟ್ಟಣೆ ಉಂಟಾಯಿತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಹೈವೇ ಪಾಟ್ರೋಲ್ ಸಿಬ್ಬಂದಿ, ಕ್ರೇನ್ ಮೂಲಕ ಬಸ್ ಅನ್ನು ಎತ್ತಿಸಿ, ಕಬ್ಬಿಣದ ಪಟ್ಟಿ ಬಿಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಬಂಡೀಪುರ ಸಫಾರಿ ವಾಹನಗಳು ಸಹ ಇದೇ ರಸ್ತೆಯ ಮೂಲಕ ಸಾಗಬೇಕಿತ್ತು. ಸಂಚಾರ ಬಂದ್ ಆಗಿದ್ದ ಕಾರಣ ಸಫಾರಿ ಕೌಂಟರ್ ಹಿಂಭಾಗದ ರಸ್ತೆಯ ಮೂಲಕ ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಊಟಿ–ಮೈಸೂರು ಹೆದ್ದಾರಿಯ ಮೇಲುಕಾಮನಹಳ್ಳಿ ಚೆಕ್ಪೋಸ್ಟ್ ಬಳಿ ಶುಕ್ರವಾರ ಬೆಳಗಿನ ಜಾವ ಕೆಎಸ್ಆರ್ಟಿಸಿಯ ‘ಐರಾವತ’ (ವೋಲ್ವೊ ಬಸ್) ತಳಭಾಗಕ್ಕೆ ಕಬ್ಬಿಣದ ಪಟ್ಟಿ ತಗುಲಿ ಮುಂದೆ ಚಲಿಸಲು ಸಾಧ್ಯವಾಗದೇ ಇದ್ದುದರಿಂದ ಬೆಳಿಗ್ಗೆ ವಾಹನ ದಟ್ಟಣೆ ಉಂಟಾಯಿತು.</p>.<p>ಬಸ್ ಬೆಂಗಳೂರಿನಿಂದ ಊಟಿಗೆ ತೆರಳುತ್ತಿತ್ತು. ಚೆಕ್ಪೋಸ್ಟ್ನ ಗೇಟನ್ನು ಹಾಕಿ ತೆಗೆಯಲು ಅಳವಡಿಸಿರುವ ಕಬ್ಬಿಣದ ಪಟ್ಟಿ ಎರಡು ದಿನಗಳ ಹಿಂದೆ, ಭಾರಿ ತೂಕದ ಲಾರಿ ಸಂಚಾರದಿಂದ ತುಂಡಾಗಿತ್ತು. ಶುಕ್ರವಾರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಐರಾವತ ಬಸ್ ಸಾಗುವಾಗ, ಪಟ್ಟಿ ಬಸ್ ತಳಕ್ಕೆ ತಗುಲಿ ಮುಂದೆ ಚಲಿಸಲು ಆಗದೇ ರಸ್ತೆಯ ಮಧ್ಯದಲ್ಲಿ ಸಿಕ್ಕಿ ಹಾಕಿಕೊಂಡಿತು.</p>.<p>ಬಂಡೀಪುರ ಅರಣ್ಯದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಮೂರು ಸಾರಿಗೆ ಬಸ್ಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇದೆ.</p>.<p>ಬಸ್ ರಸ್ತೆಯ ಮಧ್ಯದಲ್ಲೇ ಇದ್ದುದರಿಂದ ಬೆಳಿಗ್ಗೆ 6 ಗಂಟೆಯ ನಂತರ ಅಂತರರಾಜ್ಯ ನಡುವೆ ಸಂಚರಿಸುವ ವಾಹನಗಳಿಗೂ ಹೋಗಲು ಆಗಲಿಲ್ಲ. ಎರಡು ಕಿ.ಮೀ ದೂರದವರೆಗೆ ವಾಹನ ದಟ್ಟಣೆ ಉಂಟಾಯಿತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಹೈವೇ ಪಾಟ್ರೋಲ್ ಸಿಬ್ಬಂದಿ, ಕ್ರೇನ್ ಮೂಲಕ ಬಸ್ ಅನ್ನು ಎತ್ತಿಸಿ, ಕಬ್ಬಿಣದ ಪಟ್ಟಿ ಬಿಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಬಂಡೀಪುರ ಸಫಾರಿ ವಾಹನಗಳು ಸಹ ಇದೇ ರಸ್ತೆಯ ಮೂಲಕ ಸಾಗಬೇಕಿತ್ತು. ಸಂಚಾರ ಬಂದ್ ಆಗಿದ್ದ ಕಾರಣ ಸಫಾರಿ ಕೌಂಟರ್ ಹಿಂಭಾಗದ ರಸ್ತೆಯ ಮೂಲಕ ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>