<p><strong>ಚಾಮರಾಜನಗರ</strong>: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಕುವೆಂಪು ಗೀತ ಗಾಯನ ಕಾರ್ಯಕ್ರಮ ನಡೆಯಿತು.</p>.<p>ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಾಹಿತಿ ಎಸ್.ಲಕ್ಷ್ಮೀ ನರಸಿಂಹ, ‘ವಿಶ್ವಕವಿಯಾಗಿರುವ ಕುವೆಂಪು ಅವರ ಸಾಹಿತ್ಯ ಸರ್ವಶ್ರೇಷ್ಠವಾಗಿದ್ದು ಸಾಮಾಜಿಕ, ಪರಿಸರ ಹಾಗೂ ಗಂಭೀರ ವಿಚಾರಗಳ ಕುರಿತು ಚಿಂತನೆಗೆ ಒಡ್ಡುತ್ತವೆ. ಇಂಗ್ಲಿಷ್ ಸಾಹಿತ್ಯ ರಚನೆಯಲ್ಲೂ ಕುವೆಂಪು ಅವರಿಗೆ ಅಪಾರ ಒಲವಿತ್ತು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಮಾತನಾಡಿ, ಕುವೆಂಪು ಸಾಹಿತ್ಯದ ಮೇರು ಶಿಖರವಾಗಿದ್ದು ಅವರ ಬರಹಗಳಲ್ಲಿ ರಾಮಕೃಷ್ಣ ಪರಮಹಂಸರ ಚಿಂತನೆ ಹಾಗೂ ಪ್ರಭಾವ ಕಾಣಬಹುದು. ಆಧ್ಯಾತ್ಮಿಕತೆ, ಪರಿಸರ, ಸಾಮಾಜಿಕ ಮೌಲ್ಯಗಳನ್ನು ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದವರು ಕುವೆಂಪು ಎಂದರು.</p>.<p>ಶಿಕ್ಷಕ ಯಳಂದೂರು ರಂಗನಾಥ್ ಕುವೆಂಪು ಕವಿತೆಗಳ ವಾಚಿಸಿದರು. ಗಾಯಕ ಸುರೇಶ್ ನಾಗ್ ಹರದನಹಳ್ಳಿ ಕುವೆಂಪು ರಚಿತ ಗೀತೆಗಳನ್ನು ಹಾಡುವ ಮೂಲಕ ರಂಜಿಸಿದರು.</p>.<p>ಕನ್ನಡ ಮಹಾಸಭಾ ಅಧ್ಯಕ್ಷ ಚಾರಂ ಶ್ರೀನಿವಾಸಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ.ಕೆ.ಆರಾಧ್ಯ, ಶಿವಲಿಂಗಮೂರ್ತಿ, ರವಿಚಂದ್ರ ಪ್ರಸಾದ್, ಪದ್ಮ ಪುರುಷೋತ್ತಮ್, ಜಗದೀಶ್, ಪದ್ಮಾಕ್ಷಿ, ಉಪ್ಪಾರ ಸಂಘದ ಅಧ್ಯಕ್ಷ ಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಕುವೆಂಪು ಗೀತ ಗಾಯನ ಕಾರ್ಯಕ್ರಮ ನಡೆಯಿತು.</p>.<p>ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಾಹಿತಿ ಎಸ್.ಲಕ್ಷ್ಮೀ ನರಸಿಂಹ, ‘ವಿಶ್ವಕವಿಯಾಗಿರುವ ಕುವೆಂಪು ಅವರ ಸಾಹಿತ್ಯ ಸರ್ವಶ್ರೇಷ್ಠವಾಗಿದ್ದು ಸಾಮಾಜಿಕ, ಪರಿಸರ ಹಾಗೂ ಗಂಭೀರ ವಿಚಾರಗಳ ಕುರಿತು ಚಿಂತನೆಗೆ ಒಡ್ಡುತ್ತವೆ. ಇಂಗ್ಲಿಷ್ ಸಾಹಿತ್ಯ ರಚನೆಯಲ್ಲೂ ಕುವೆಂಪು ಅವರಿಗೆ ಅಪಾರ ಒಲವಿತ್ತು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಮಾತನಾಡಿ, ಕುವೆಂಪು ಸಾಹಿತ್ಯದ ಮೇರು ಶಿಖರವಾಗಿದ್ದು ಅವರ ಬರಹಗಳಲ್ಲಿ ರಾಮಕೃಷ್ಣ ಪರಮಹಂಸರ ಚಿಂತನೆ ಹಾಗೂ ಪ್ರಭಾವ ಕಾಣಬಹುದು. ಆಧ್ಯಾತ್ಮಿಕತೆ, ಪರಿಸರ, ಸಾಮಾಜಿಕ ಮೌಲ್ಯಗಳನ್ನು ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದವರು ಕುವೆಂಪು ಎಂದರು.</p>.<p>ಶಿಕ್ಷಕ ಯಳಂದೂರು ರಂಗನಾಥ್ ಕುವೆಂಪು ಕವಿತೆಗಳ ವಾಚಿಸಿದರು. ಗಾಯಕ ಸುರೇಶ್ ನಾಗ್ ಹರದನಹಳ್ಳಿ ಕುವೆಂಪು ರಚಿತ ಗೀತೆಗಳನ್ನು ಹಾಡುವ ಮೂಲಕ ರಂಜಿಸಿದರು.</p>.<p>ಕನ್ನಡ ಮಹಾಸಭಾ ಅಧ್ಯಕ್ಷ ಚಾರಂ ಶ್ರೀನಿವಾಸಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ.ಕೆ.ಆರಾಧ್ಯ, ಶಿವಲಿಂಗಮೂರ್ತಿ, ರವಿಚಂದ್ರ ಪ್ರಸಾದ್, ಪದ್ಮ ಪುರುಷೋತ್ತಮ್, ಜಗದೀಶ್, ಪದ್ಮಾಕ್ಷಿ, ಉಪ್ಪಾರ ಸಂಘದ ಅಧ್ಯಕ್ಷ ಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>