ಜಿಲ್ಲೆಯಲ್ಲಿ ಶಾಲಾ ಕೊಠಡಿಗಳ ದುರಸ್ತಿ ಶೌಚಾಲಯಗಳ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಹಾಗೂ ನರೇಗಾ ಯೋಜನೆಯಡಿ ಅನುದಾನ ದೊರೆತಿದೆ. ಸರ್ಕಾರದಿಂದಲೂ ಅಗತ್ಯ ಅನುದಾನ ಬಿಡುಗಡೆ ನಿರೀಕ್ಷೆ ಇದೆ.– ರಾಮಚಂದ್ರ ರಾಜೇಅರಸ್ ಡಿಡಿಪಿಐ ಚಾಮರಾಜನಗರ
ಬೇರಂಬಾಡಿಯ ಶಾಲೆಯ ಸಮಸ್ಯೆಗಳು ಗಮನಕ್ಕೆ ಬಂದಿದ್ದು ಸರ್ಕಾರದಿಂದ ಅನುದಾನ ಬಂದ ಕೂಡಲೇ ದುರಸ್ತಿ ಮಾಡಲಾಗುವುದು.–ರಾಜಶೇಖರ್ ಕ್ಷೇತ್ರ ಶಿಕ್ಷಣಾಧಿಕಾರಿ ಗುಂಡ್ಲುಪೇಟೆ
31 ಶಾಲೆಗಳು ದುರಸ್ತಿಯಲ್ಲಿದ್ದು ಕ್ರಿಯಾ ಯೋಜನೆ ತಯಾರು ಮಾಡಿ ಇಲಾಖೆಗೆ ಕಳುಹಿಸಲಾಗಿದೆ. ಶೀಘ್ರ ಶಾಲೆಗಳ ದುರಸ್ತಿ ಹಾಗೂ ಉನ್ನತೀಕರಣ ನಡೆಯಲಿದೆ. ಕೊಠಡಿ ಸಮಸ್ಯೆ ಕಂಡು ಬಂದರೆ ಪರ್ಯಾಐ ವ್ಯವಸ್ಥೆ ಮಾಡಲಾಗುವುದು.– ಮಂಜುಳಾ ಕ್ಷೇತ್ರ ಶಿಕ್ಷಣಾಧಿಕಾರಿ ಕೊಳ್ಳೇಗಾಲ
ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲದೆ ಶಿಥಿಲಾವಸ್ಥೆ ತಲುಪಿವೆ. ಸಂತೇಮರಹಳ್ಳಿಯಲ್ಲಿ ನಾಲ್ಕು ಕೊಠಡಿಗಳು ದುರಸ್ತಿಯಲ್ಲಿವೆ. ಮಕ್ಕಳ ವ್ಯಾಸಂಗಕ್ಕೆ ಕೊಠಡಿಗಳ ಕೊರತೆ ಇದೆ. ಮಳೆಗಾಲದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ.–ರಾಜು ಸಂತೇಮರಹಳ್ಳಿ.
ತಾಲೂಕಿನಲ್ಲಿ ಬೆರಳೆಣಿಕೆ ಶಾಲೆಗಳು ಹಾಗೂ ಐತಿಹಾಸಿಕ ಕಟ್ಟಡಗಳಲ್ಲಿರುವ ಕೆಲವು ಕೊಠಡಿಗಳು ಬಳಕೆಗೆ ಸೂಕ್ತವಾಗಿಲ್ಲ. ಉಳಿದಂತೆ ಎಲ್ಲ ಶಾಲೆಗಳು ಸುಸ್ಥಿತಿಯಲ್ಲಿವೆ.-ಕೆ. ಕಾಂತರಾಜು ಕ್ಷೇತ್ರ ಶಿಕ್ಷಣಾಧಿಕಾರಿ ಯಳಂದೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.