ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ಮಕ್ಕಳ ನೆತ್ತಿಯ ಮೇಲೆ ಅಪಾಯದ ತೂಗುಗತ್ತಿ!

Published : 17 ಜೂನ್ 2024, 6:48 IST
Last Updated : 17 ಜೂನ್ 2024, 6:48 IST
ಫಾಲೋ ಮಾಡಿ
Comments
ಗುಂಡ್ಲುಪೇಟೆ ತಾಲ್ಲೂಕಿನ ಬೇರಾಂಬಾಡಿ ಶಾಲೆ ನಿರ್ವಹಣೆ ಕೊರತೆಯಿಂದ ದುಸ್ಥಿತಿ ತಲುಪಿರುವುದು
ಗುಂಡ್ಲುಪೇಟೆ ತಾಲ್ಲೂಕಿನ ಬೇರಾಂಬಾಡಿ ಶಾಲೆ ನಿರ್ವಹಣೆ ಕೊರತೆಯಿಂದ ದುಸ್ಥಿತಿ ತಲುಪಿರುವುದು
ಚಾಮರಾಜನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿರುವ ಪ್ರೌಢಶಾಲೆ ವಿಭಾಗ
ಚಾಮರಾಜನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿರುವ ಪ್ರೌಢಶಾಲೆ ವಿಭಾಗ
ಚಾಮರಾಜನಗರದಲ್ಲಿರುವ ಉರ್ದು ಶಾಲೆಯ ಕೊಠಡಿಯ ದುಸ್ಥಿತಿ
ಚಾಮರಾಜನಗರದಲ್ಲಿರುವ ಉರ್ದು ಶಾಲೆಯ ಕೊಠಡಿಯ ದುಸ್ಥಿತಿ
ಜಿಲ್ಲೆಯಲ್ಲಿ ಶಾಲಾ ಕೊಠಡಿಗಳ ದುರಸ್ತಿ ಶೌಚಾಲಯಗಳ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಹಾಗೂ ನರೇಗಾ ಯೋಜನೆಯಡಿ ಅನುದಾನ ದೊರೆತಿದೆ. ಸರ್ಕಾರದಿಂದಲೂ ಅಗತ್ಯ ಅನುದಾನ ಬಿಡುಗಡೆ ನಿರೀಕ್ಷೆ ಇದೆ.
– ರಾಮಚಂದ್ರ ರಾಜೇಅರಸ್ ಡಿಡಿಪಿಐ ಚಾಮರಾಜನಗರ
ಬೇರಂಬಾಡಿಯ ಶಾಲೆಯ ಸಮಸ್ಯೆಗಳು ಗಮನಕ್ಕೆ ಬಂದಿದ್ದು ಸರ್ಕಾರದಿಂದ ಅನುದಾನ ಬಂದ ಕೂಡಲೇ ದುರಸ್ತಿ ಮಾಡಲಾಗುವುದು.
–ರಾಜಶೇಖರ್ ಕ್ಷೇತ್ರ ಶಿಕ್ಷಣಾಧಿಕಾರಿ ಗುಂಡ್ಲುಪೇಟೆ
31 ಶಾಲೆಗಳು ದುರಸ್ತಿಯಲ್ಲಿದ್ದು ಕ್ರಿಯಾ ಯೋಜನೆ ತಯಾರು ಮಾಡಿ ಇಲಾಖೆಗೆ ಕಳುಹಿಸಲಾಗಿದೆ. ಶೀಘ್ರ ಶಾಲೆಗಳ ದುರಸ್ತಿ ಹಾಗೂ ಉನ್ನತೀಕರಣ ನಡೆಯಲಿದೆ. ಕೊಠಡಿ ಸಮಸ್ಯೆ ಕಂಡು ಬಂದರೆ ಪರ್ಯಾಐ ವ್ಯವಸ್ಥೆ ಮಾಡಲಾಗುವುದು.
– ಮಂಜುಳಾ ಕ್ಷೇತ್ರ ಶಿಕ್ಷಣಾಧಿಕಾರಿ ಕೊಳ್ಳೇಗಾಲ
ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲದೆ ಶಿಥಿಲಾವಸ್ಥೆ ತಲುಪಿವೆ. ಸಂತೇಮರಹಳ್ಳಿಯಲ್ಲಿ ನಾಲ್ಕು ಕೊಠಡಿಗಳು ದುರಸ್ತಿಯಲ್ಲಿವೆ. ಮಕ್ಕಳ ವ್ಯಾಸಂಗಕ್ಕೆ ಕೊಠಡಿಗಳ ಕೊರತೆ ಇದೆ. ಮಳೆಗಾಲದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ.
–ರಾಜು ಸಂತೇಮರಹಳ್ಳಿ.
ತಾಲೂಕಿನಲ್ಲಿ ಬೆರಳೆಣಿಕೆ ಶಾಲೆಗಳು ಹಾಗೂ ಐತಿಹಾಸಿಕ ಕಟ್ಟಡಗಳಲ್ಲಿರುವ ಕೆಲವು ಕೊಠಡಿಗಳು ಬಳಕೆಗೆ ಸೂಕ್ತವಾಗಿಲ್ಲ. ಉಳಿದಂತೆ ಎಲ್ಲ ಶಾಲೆಗಳು ಸುಸ್ಥಿತಿಯಲ್ಲಿವೆ.
-ಕೆ. ಕಾಂತರಾಜು ಕ್ಷೇತ್ರ ಶಿಕ್ಷಣಾಧಿಕಾರಿ ಯಳಂದೂರು
ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಗಳ ವಿವರ
ತಾಲ್ಲೂಕು;ಶಾಲೆಗಳ ಸಂಖ್ಯೆ ಚಾಮರಾಜನಗರ;282 ಗುಂಡ್ಲುಪೇಟೆ;194 ಕೊಳ್ಳೇಗಾಲ;104 ಹನೂರು;164 ಯಳಂದೂರು;63
ಗುಂಡ್ಲುಪೇಟೆ ವರದಿ
ಕೋವಿಡ್  ಆರಂಭಕ್ಕೂ ಮುನ್ನ ತಾಲ್ಲೂಕಿನ ಮಾದರಿ ಶಾಲೆಗಳಲ್ಲಿ ಒಂದಾಗಿದ್ದ ಜಿಲ್ಲಾ ಮಟ್ಟದಲ್ಲಿ ಪರಿಸರ ಸ್ನೇಹಿ ಶಾಲೆ ಹಾಗೂ ತ್ಯಾಜ್ಯ ನೀರಿನ ಸಂಸ್ಕರಣ ಘಟಕವಿರುವ ರಾಜ್ಯದ ಮೊದಲ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ತಾಲ್ಲೂಕಿನ ಬೇರಂಬಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎರಡು ವರ್ಷಗಳಿಂದ ನಿರ್ವಹಣೆ ಕೊರತೆಯಿಂದ ಪಾಳುಬಿದ್ದಿದೆ. 160 ಮಕ್ಕಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಿರ್ವಹಣೆ ಕೊರತೆಯಿಂದ ಕೊಠಡಿಗಳು ಹಾಳಾಗಿದ್ದು ಪೋಷಕರು ಮಕ್ಕಳನ್ನು ಕಳುಹಿಸಲು ಆತಂಕ ಪಡುತ್ತಿದ್ದಾರೆ. ಇಲ್ಲಿರುವ ಆರು ಕೊಠಡಿಗಳು ಶಿಥಿಲವಾಗಿದ್ದು ಮಳೆ ಬಂದರೆ ಸೋರುತ್ತವೆ. ಮಕ್ಕಳಿಗೆ ಕೊಠಡಿಗಳಲ್ಲಿ  ಕೂರಲು ಆಗುತ್ತಿಲ್ಲ. ಜಾಗದ ಕೊರತೆಯಿಂದ ಬೇರೆ ತರಗತಿಗಳಲ್ಲಿ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ. ಶಾಲಾ ಆವರಣದಲ್ಲಿ ಅನೈರ್ಮಲ್ಯ ಕಾಣುತ್ತದೆ. ಶಾಲೆ ದುರಸ್ತಿಗೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎನ್ನುತ್ತಾರೆ ಶಾಲೆಯ ಸಿಬ್ಬಂದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT