<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯ ಕಲ್ಲಿಗೌಡನಹಳ್ಳಿ ವಗರಕಟ್ಟೆ ಕೆರೆಯ ಮಣ್ಣನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p> ಪಂಚಾಯಿತಿ ಸದಸ್ಯರೊಬ್ಬರು ಬೆಂಗಳೂರಿನ ಉದ್ಯಮಿಯೊಬ್ಬರ ಜಮೀನಿಗೆ ಲೋಡ್ಗೆ ₹600ರಂತೆ ಮಣ್ಣು ಮಾರಾಟ ಮಾಡುತ್ತಿದ್ದಾರೆ. ಪಂಚಾಯತಿ ಅಧಿಕಾರಿಗಳಾಗಲಿ, ತಹಶೀಲ್ದಾರ್ ಆಗಲಿ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಹಿಂದೆಯೂ ಅನೇಕ ಭಾರಿ ಕೆರೆ ಮತ್ತು ಕಂದಾಯ ಭೂಮಿಯಲ್ಲಿ ಮಣ್ಣನ್ನು ತೆಗೆದಿದ್ದರು. ಅಂದು ಗ್ರಾಮ ಆಡಳಿತಾಧಿಕಾರಿ ಅವರು ಭೇಟಿ ಮಾಡಿ ಮಣ್ಣು ತೆಗೆಯದಂತೆ ಎಚ್ಚರ ನೀಡಿದ್ದರು.</p>.<p>ಹಂಗಳ ಹೋಬಳಿ ಕಲೀಗೌಡನಹಳ್ಳಿ ಗ್ರಾಮದ ಸ.ನಂ. 37/1 ವಗರಕಟ್ಟೆ ಕೆರೆಯಲ್ಲಿ ಅನುಮತಿ ಪಡೆಯದೇ ಮಣ್ಣು ಎತ್ತುವಳಿ ಮಾಡುತ್ತಿರುವ ಬಗ್ಗೆ ದೂರು ಬಂದ ಮೇರೆಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿ ದೆ. ಸಣ್ಣ ನೀರಾವರಿ ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿವಳಿಕೆ ನೀಡಲಾಗಿದೆ ಎಂದು ಗ್ರಾಮ ಆಡಳಿತಾಧಿಕಾರಿಎಂ.ವೈ.ಆರುಣ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯ ಕಲ್ಲಿಗೌಡನಹಳ್ಳಿ ವಗರಕಟ್ಟೆ ಕೆರೆಯ ಮಣ್ಣನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p> ಪಂಚಾಯಿತಿ ಸದಸ್ಯರೊಬ್ಬರು ಬೆಂಗಳೂರಿನ ಉದ್ಯಮಿಯೊಬ್ಬರ ಜಮೀನಿಗೆ ಲೋಡ್ಗೆ ₹600ರಂತೆ ಮಣ್ಣು ಮಾರಾಟ ಮಾಡುತ್ತಿದ್ದಾರೆ. ಪಂಚಾಯತಿ ಅಧಿಕಾರಿಗಳಾಗಲಿ, ತಹಶೀಲ್ದಾರ್ ಆಗಲಿ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಹಿಂದೆಯೂ ಅನೇಕ ಭಾರಿ ಕೆರೆ ಮತ್ತು ಕಂದಾಯ ಭೂಮಿಯಲ್ಲಿ ಮಣ್ಣನ್ನು ತೆಗೆದಿದ್ದರು. ಅಂದು ಗ್ರಾಮ ಆಡಳಿತಾಧಿಕಾರಿ ಅವರು ಭೇಟಿ ಮಾಡಿ ಮಣ್ಣು ತೆಗೆಯದಂತೆ ಎಚ್ಚರ ನೀಡಿದ್ದರು.</p>.<p>ಹಂಗಳ ಹೋಬಳಿ ಕಲೀಗೌಡನಹಳ್ಳಿ ಗ್ರಾಮದ ಸ.ನಂ. 37/1 ವಗರಕಟ್ಟೆ ಕೆರೆಯಲ್ಲಿ ಅನುಮತಿ ಪಡೆಯದೇ ಮಣ್ಣು ಎತ್ತುವಳಿ ಮಾಡುತ್ತಿರುವ ಬಗ್ಗೆ ದೂರು ಬಂದ ಮೇರೆಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿ ದೆ. ಸಣ್ಣ ನೀರಾವರಿ ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿವಳಿಕೆ ನೀಡಲಾಗಿದೆ ಎಂದು ಗ್ರಾಮ ಆಡಳಿತಾಧಿಕಾರಿಎಂ.ವೈ.ಆರುಣ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>