‘ಸ್ಮಶಾನಗಳನ್ನು ಮುಕ್ತಿಧಾಮ, ಶಾಂತಿಧಾಮದ ಮಾದರಿಯಲ್ಲಿ ರೂಪಿಸಬೇಕು. ಸ್ಮಶಾನಕ್ಕೆ ಅಗತ್ಯವಾಗಿರುವ ಕಾಂಪೌಂಡ್, ನೆರಳಿನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಂಬಂಧಿಸಿದ ಇಲಾಖೆಗಳು ಗ್ರಾಮ ಪಂಚಾಯಿತಿಗಳ ಸಹಯೋಗವನ್ನು ಪಡೆದುಕೊಂಡು ನರೇಗಾ ಅಡಿಯಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಇದಕ್ಕಾಗಿ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವನ್ನೂ ಪಡೆಯಬೇಕು’ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.