ಹನೂರು (ಚಾಮರಾಜನಗರ): ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಗರಿಕೆಕಂಡಿಯಿಂದ ತಮಿಳುನಾಡಿನ ಹಂದಿಯೂರು ನಡುವೆ ವಿವಿಧ ಕಡೆ ಗುಡ್ಡ ಕುಸಿತವಾಗಿದ್ದು, ಗರಿಕೆಕಂಡಿ ಚೆಕ್ ಪೋಸ್ಟ್ನಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾನುವಾರದಿಂದ ನಾಲ್ಕು ದಿನಗಳ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.