ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೆ ಕಾರ್ತಿಕ ಸೋಮವಾರ: ವಿಶೇಷ ಪೂಜೆ

Published 11 ಡಿಸೆಂಬರ್ 2023, 16:01 IST
Last Updated 11 ಡಿಸೆಂಬರ್ 2023, 16:01 IST
ಅಕ್ಷರ ಗಾತ್ರ

ಚಾಮರಾಜನಗರ: ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ಶಿವನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನೆರವೇರಿದವು. 

ಭಕ್ತರು ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯ, ಹರದನಹಳ್ಳಿಯ ದಿವ್ಯಲಿಂಗೇಶ್ವರ, ಯಡಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ಭಕ್ತರ ಸಂದಣಿ ಹೆಚ್ಚಿತ್ತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. 

ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿರುವ ಸಹಸ್ರಲಿಂಗೇಶ್ವರನಿಗೆ ನಡೆದ ಪೂಜೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಶಿವಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. 

ಗುಂಡ್ಲುಪೇಟೆ ತಾಲ್ಲೂಕಿನ ಹುಲುಗನಮುರಡಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೆಂಕಟರಮಣ ಸ್ವಾಮಿ ದೇವರಿಗೆ ರಾತ್ರಿ ಬೆಣ್ಣೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಪೂಜೆಯ ನಂತರ ದೇವಾಲಯದಲ್ಲಿ ಗರುಡೋತ್ಸವ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. 

ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಸಹಸ್ರಲಿಂಗೇಶ್ವರ ಸ್ವಾಮಿಗೆ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು
ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಸಹಸ್ರಲಿಂಗೇಶ್ವರ ಸ್ವಾಮಿಗೆ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು
ಗುಂಡ್ಲುಪೇಟೆ ತಾಲ್ಲೂಕಿನ ಹುಲುಗನಮುರಡಿ ವೆಂಕರಮಣಸ್ವಾಮಿಗೆ ಕಡೆ ಕಾರ್ತಿಕ ಸೋಮವಾರದಂದು ಬೆಣ್ಣೆ ಅಲಂಕಾರ ಮಾಡಲಾಗಿತ್ತು
ಗುಂಡ್ಲುಪೇಟೆ ತಾಲ್ಲೂಕಿನ ಹುಲುಗನಮುರಡಿ ವೆಂಕರಮಣಸ್ವಾಮಿಗೆ ಕಡೆ ಕಾರ್ತಿಕ ಸೋಮವಾರದಂದು ಬೆಣ್ಣೆ ಅಲಂಕಾರ ಮಾಡಲಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT