<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಪಡಿತರ ಚೀಟಿ ಇ–ಕೆವೈಸಿ ಮಾಡಿಸಿಕೊಳ್ಳಲು ಇನ್ನೂ 1,26,821 ಮಂದಿ ಬಾಕಿ ಇದ್ದು,ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಇ–ಕೆವೈಸಿ ಮಾಡಿಸಿಕೊಳ್ಳಲು ಇದೇ 10ರವರೆಗೆ ಕೊನೆ ಅವಕಾಶ ನೀಡಿದೆ.</p>.<p>ಜಿಲ್ಲೆಯಲ್ಲಿ 35,977 ಎ.ಎ.ವೈ (ಅಂತ್ಯೊದಯ) ಪಡಿತರ ಚೀಟಿಗಳಿದ್ದು, 1,37,510 ಸದಸ್ಯರಿದ್ದಾರೆ. ಈ ಪೈಕಿ 1,14,196 ಸದಸ್ಯರ ಇ-ಕೆವೈಸಿ ಆಗಿದ್ದು, ಉಳಿದ 23,316 ಸದಸ್ಯರ ಇ-ಕೆವೈಸಿ ಆಗಬೇಕಿದೆ.</p>.<p>ಜಿಲ್ಲೆಯಲ್ಲಿ ಇದುವರೆಗೆ2,53,135 ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, 7,20,355 ಫಲಾನುಭವಿಗಳಿದ್ದಾರೆ. ಈ ಪೈಕಿ 6,16,850 ಸದಸ್ಯರ ಇ-ಕೆವೈಸಿಯಾಗಿದ್ದು, ಇನ್ನೂ 1,03,505 ಸದಸ್ಯರ ದೃಢೀಕರಣ ಬಾಕಿ ಇದೆ.</p>.<p>ಪ್ರತಿ ದಿನ ಬೆಳಿಗ್ಗೆ 8ರಿಂದ ರಾತ್ರಿ 8ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಆಗಿಲ್ಲದವರ ಮಾಹಿತಿ ಪಟ್ಟಿಯನ್ನು ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದೆ.</p>.<p>ಪಡಿತರ ಚೀಟಿ (ರೇಷನ್ ಕಾರ್ಡ್), ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ, ಅಡುಗೆ ಅನಿಲ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಕುಟುಂಬದವರ ಸಂಬಂಧ ಮಾಹಿತಿ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಬೇಕು.</p>.<p>‘ಇ-ಕೆವೈಸಿ ಮಾಡಿಸದೇ ಇರುವ ಫಲಾನುಭವಿಗಳು ಇದೇ 10ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇದು ಅಂತಿಮ ಅವಕಾಶವಾಗಿದೆ’ ಎಂದುಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಪಡಿತರ ಚೀಟಿ ಇ–ಕೆವೈಸಿ ಮಾಡಿಸಿಕೊಳ್ಳಲು ಇನ್ನೂ 1,26,821 ಮಂದಿ ಬಾಕಿ ಇದ್ದು,ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಇ–ಕೆವೈಸಿ ಮಾಡಿಸಿಕೊಳ್ಳಲು ಇದೇ 10ರವರೆಗೆ ಕೊನೆ ಅವಕಾಶ ನೀಡಿದೆ.</p>.<p>ಜಿಲ್ಲೆಯಲ್ಲಿ 35,977 ಎ.ಎ.ವೈ (ಅಂತ್ಯೊದಯ) ಪಡಿತರ ಚೀಟಿಗಳಿದ್ದು, 1,37,510 ಸದಸ್ಯರಿದ್ದಾರೆ. ಈ ಪೈಕಿ 1,14,196 ಸದಸ್ಯರ ಇ-ಕೆವೈಸಿ ಆಗಿದ್ದು, ಉಳಿದ 23,316 ಸದಸ್ಯರ ಇ-ಕೆವೈಸಿ ಆಗಬೇಕಿದೆ.</p>.<p>ಜಿಲ್ಲೆಯಲ್ಲಿ ಇದುವರೆಗೆ2,53,135 ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, 7,20,355 ಫಲಾನುಭವಿಗಳಿದ್ದಾರೆ. ಈ ಪೈಕಿ 6,16,850 ಸದಸ್ಯರ ಇ-ಕೆವೈಸಿಯಾಗಿದ್ದು, ಇನ್ನೂ 1,03,505 ಸದಸ್ಯರ ದೃಢೀಕರಣ ಬಾಕಿ ಇದೆ.</p>.<p>ಪ್ರತಿ ದಿನ ಬೆಳಿಗ್ಗೆ 8ರಿಂದ ರಾತ್ರಿ 8ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಆಗಿಲ್ಲದವರ ಮಾಹಿತಿ ಪಟ್ಟಿಯನ್ನು ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದೆ.</p>.<p>ಪಡಿತರ ಚೀಟಿ (ರೇಷನ್ ಕಾರ್ಡ್), ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ, ಅಡುಗೆ ಅನಿಲ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಕುಟುಂಬದವರ ಸಂಬಂಧ ಮಾಹಿತಿ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಬೇಕು.</p>.<p>‘ಇ-ಕೆವೈಸಿ ಮಾಡಿಸದೇ ಇರುವ ಫಲಾನುಭವಿಗಳು ಇದೇ 10ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇದು ಅಂತಿಮ ಅವಕಾಶವಾಗಿದೆ’ ಎಂದುಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>