ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಗೌರವಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರು, ‘ಚಾಮುಲ್ನಲ್ಲಿ ರೋಸ್ಟರ್ ಪದ್ಧತಿಯನ್ನು ಉಲ್ಲಂಘಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಅಂಗವಿಕಲರು ಹಾಗೂ ಮಹಿಳೆಯರಿಗೆ ಮೀಸಲಾಗಿದ್ದ 18 ಹುದ್ದೆಗಳನ್ನು ಹಣ ಪಡೆದು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದರು.