<p><strong>ಚಾಮರಾಜನಗರ:</strong> ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವನ್ನು (ಚಾಮುಲ್) ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಿ, ನಡೆದಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಗೌರವಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರು, ‘ಚಾಮುಲ್ನಲ್ಲಿ ರೋಸ್ಟರ್ ಪದ್ಧತಿಯನ್ನು ಉಲ್ಲಂಘಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಅಂಗವಿಕಲರು ಹಾಗೂ ಮಹಿಳೆಯರಿಗೆ ಮೀಸಲಾಗಿದ್ದ 18 ಹುದ್ದೆಗಳನ್ನು ಹಣ ಪಡೆದು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಚಾಮುಲ್ ನಷ್ಟದಲ್ಲಿ ನಡೆಯುತ್ತಿದೆ ಎಂದು ಅದರ ಅಧ್ಯಕ್ಷರು ಇತ್ತೀಚೆಗೆ ಹೇಳಿದ್ದಾರೆ. ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವೇತನಕೊಡಲು ಪ್ರತಿ ತಿಂಗಳು ₹2 ಕೋಟಿ ಬೇಕು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರಿಗೆ ಹಣ ಕೊಡಲು ಆಗದ ಸ್ಥಿತಿ ನಿರ್ಮಾಣವಾಗಲಿದೆ. ಅಕ್ರಮವಾಗಿ ನೇಮಕವಾಗಿರುವರವನ್ನು ತಕ್ಷಣ ವಜಾಗೊಳಿಸಬೇಕು. ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.</p>.<p>ಸಮಿತಿಯ ಅಧ್ಯಕ್ಷ ವೀರಭದ್ರಸ್ವಾಮಿ, ಉಪಾಧ್ಯಕ್ಷ ಬಂಗಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವನ್ನು (ಚಾಮುಲ್) ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಿ, ನಡೆದಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಗೌರವಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರು, ‘ಚಾಮುಲ್ನಲ್ಲಿ ರೋಸ್ಟರ್ ಪದ್ಧತಿಯನ್ನು ಉಲ್ಲಂಘಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಅಂಗವಿಕಲರು ಹಾಗೂ ಮಹಿಳೆಯರಿಗೆ ಮೀಸಲಾಗಿದ್ದ 18 ಹುದ್ದೆಗಳನ್ನು ಹಣ ಪಡೆದು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಚಾಮುಲ್ ನಷ್ಟದಲ್ಲಿ ನಡೆಯುತ್ತಿದೆ ಎಂದು ಅದರ ಅಧ್ಯಕ್ಷರು ಇತ್ತೀಚೆಗೆ ಹೇಳಿದ್ದಾರೆ. ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವೇತನಕೊಡಲು ಪ್ರತಿ ತಿಂಗಳು ₹2 ಕೋಟಿ ಬೇಕು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರಿಗೆ ಹಣ ಕೊಡಲು ಆಗದ ಸ್ಥಿತಿ ನಿರ್ಮಾಣವಾಗಲಿದೆ. ಅಕ್ರಮವಾಗಿ ನೇಮಕವಾಗಿರುವರವನ್ನು ತಕ್ಷಣ ವಜಾಗೊಳಿಸಬೇಕು. ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.</p>.<p>ಸಮಿತಿಯ ಅಧ್ಯಕ್ಷ ವೀರಭದ್ರಸ್ವಾಮಿ, ಉಪಾಧ್ಯಕ್ಷ ಬಂಗಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>