<p><strong>ಚಾಮರಾಜನಗರ:</strong> ತಾಲ್ಲೂಕಿನ ವೀರನಪುರ ಮತ್ತು ಹಳೇಪುರ ಗ್ರಾಮಗಳಲ್ಲಿ ಶುಕ್ರವಾರ ಮುಂಜಾನೆ ಮೂವರು ರೈತರ ಮೇಲೆ ಚಿರತೆ ದಾಳಿ ನಡೆಸಿದೆ. ಮೂವರಿಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ವೀರನಪುರ ಗ್ರಾಮದ ಶಂಭುಲಿಂಗಪ್ಪ, ಗಣೇಶ್ ಹಾಗೂ ಹಳೇಪುರ ಗ್ರಾಮದ ಸಿದ್ದರಾಜು ಅವರು ಚಿರತೆ ದಾಳಿಗೆ ತುತ್ತಾದವರು.</p>.<p>ಮೂವರ ಮೇಲೆಯೂಒಂದೇ ಚಿರತೆ ದಾಳಿ ನಡೆಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಅದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶಂಭುಲಿಂಗಪ್ಪ ಅವರು ತಮ್ಮ ಜಮೀನಿನ ಗುಡಿಸಲಿನಲ್ಲಿ ಮಲಗಿದ್ದ ಸಂದರ್ಭದಲ್ಲಿ ಚಿರತೆ ಬಂದಿದೆ. ಇದು ಗೊತ್ತಾಗುತ್ತಿದ್ದಂತೆ ಅದನ್ನು ಓಡಿಸಲು ಮುಂದಾದರು. ಈ ಸಂದರ್ಭದಲ್ಲಿ ಚಿರತೆ ಅವರ ಮೇಲೆ ದಾಳಿ ನಡೆಸಿತು. ಕತ್ತು, ಬೆನ್ನು ಮತ್ತು ಬಲ ಕೈಗೆ ಗಾಯವಾಗಿದೆ.</p>.<p>ಶಂಭುಲಿಂಗಪ್ಪ ಅವರು ಚೀರಾಡುತ್ತಿದ್ದಂತೆಯೇ ಪಕ್ಕದ ಜಮೀನಿನಲ್ಲಿದ್ದ ಗಣೇಶ್ ಅವರು ಬಂದು, ಊರಿನವರಿಗೆ ಕರೆ ಮಾಡುವ ಸಂದರ್ಭದಲ್ಲಿ ಚಿರತೆ ಅವರ ಮೇಲೆಯೂ ದಾಳಿ ಮಾಡಿ ಕುತ್ತಿಗೆ ಹಾಗೂ ತಲೆಯ ಹಿಂಭಾಗಕ್ಕೆ ಗಾಯಗೊಳಿಸಿ ಅಲ್ಲಿಂದ ಓಡಿ ಹೋಗಿ ಹೋಯಿತು.</p>.<p>ವೀರನಪುರ ಗ್ರಾಮಕ್ಕೆ ಸಮೀಪದಲ್ಲಿರುವ ಹಳೇಪುರ ಗ್ರಾಮದಲ್ಲಿ ಕೊಟ್ಟಿಗೆಯೊಂದರಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಹಸುವಿನ ಮಾಲೀಕ ಸಿದ್ದರಾಜು ಅವರು ಚಿರತೆ ಮೇಲೆ ಬ್ಯಾಟರಿ ಲೈಟ್ ಬೆಳಕನ್ನು ಹಾಯಿಸುತ್ತಿದ್ದಂತೆ ಚಿರತೆ ಅವರತ್ತ ನೆಗೆದಿದೆ. ಸಿದ್ದರಾಜು ಅವರ ಎಡ ಭುಜ ಹಾಗೂ ಬೆನ್ನಿಗೆ ಏಟಾಗಿದೆ.</p>.<p>ತಕ್ಷಣವೇ ಮೂವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪ್ರಾಣಕ್ಕೂ ಅಪಾಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<p class="Subhead"><strong>ಸೆರೆಗೆ ಕಾರ್ಯಾಚರಣೆ:</strong> ಈ ಮಧ್ಯೆ, ದಾಳಿ ನಡೆಸಿದ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.</p>.<p>‘ಹಳೇಪುರ, ವೀರನಪುರದ ಸುತ್ತಮುತ್ತ ಐದು ಬೋನುಗಳನ್ನು ಇಡಲಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ವಲಯ ಅರಣ್ಯ ಅಧಿಕಾರಿ ಅಭಿಲಾಷ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead"><strong>ಮೂರ್ನಾಲ್ಕು ತಿಂಗಳಿಂದ ಹಾವಳಿ</strong></p>.<p>‘ವೀರನಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಮೂರ್ನಾಲ್ಕು ತಿಂಗಳುಗಳಿಂದ ಚಿರತೆಗಳ ಹಾವಳಿ ಜೋರಾಗಿದೆ. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇವೆ. ಅರಣ್ಯ ಇಲಾಖೆ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮದ ಪ್ರದೀಪ್ ದೂರಿದರು.</p>.<p>ಈ ಭಾಗದಲ್ಲಿ ಹಲವು ಕಲ್ಲಿನ ಕ್ವಾರಿಗಳಿದ್ದು, ಅಲ್ಲಿ ಚಿರತೆಗಳು ಆಶ್ರಯ ಪಡೆಯುತ್ತಿವೆ. ಗ್ರಾಮದ ಸುತ್ತಮುತ್ತಮೂರ್ನಾಲ್ಕು ಚಿರತೆಗಳು ಓಡಾಡುತ್ತಿವೆ. ಇನ್ನಾದರೂ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ವೀರನಪುರ ಮತ್ತು ಹಳೇಪುರ ಗ್ರಾಮಗಳಲ್ಲಿ ಶುಕ್ರವಾರ ಮುಂಜಾನೆ ಮೂವರು ರೈತರ ಮೇಲೆ ಚಿರತೆ ದಾಳಿ ನಡೆಸಿದೆ. ಮೂವರಿಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ವೀರನಪುರ ಗ್ರಾಮದ ಶಂಭುಲಿಂಗಪ್ಪ, ಗಣೇಶ್ ಹಾಗೂ ಹಳೇಪುರ ಗ್ರಾಮದ ಸಿದ್ದರಾಜು ಅವರು ಚಿರತೆ ದಾಳಿಗೆ ತುತ್ತಾದವರು.</p>.<p>ಮೂವರ ಮೇಲೆಯೂಒಂದೇ ಚಿರತೆ ದಾಳಿ ನಡೆಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಅದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶಂಭುಲಿಂಗಪ್ಪ ಅವರು ತಮ್ಮ ಜಮೀನಿನ ಗುಡಿಸಲಿನಲ್ಲಿ ಮಲಗಿದ್ದ ಸಂದರ್ಭದಲ್ಲಿ ಚಿರತೆ ಬಂದಿದೆ. ಇದು ಗೊತ್ತಾಗುತ್ತಿದ್ದಂತೆ ಅದನ್ನು ಓಡಿಸಲು ಮುಂದಾದರು. ಈ ಸಂದರ್ಭದಲ್ಲಿ ಚಿರತೆ ಅವರ ಮೇಲೆ ದಾಳಿ ನಡೆಸಿತು. ಕತ್ತು, ಬೆನ್ನು ಮತ್ತು ಬಲ ಕೈಗೆ ಗಾಯವಾಗಿದೆ.</p>.<p>ಶಂಭುಲಿಂಗಪ್ಪ ಅವರು ಚೀರಾಡುತ್ತಿದ್ದಂತೆಯೇ ಪಕ್ಕದ ಜಮೀನಿನಲ್ಲಿದ್ದ ಗಣೇಶ್ ಅವರು ಬಂದು, ಊರಿನವರಿಗೆ ಕರೆ ಮಾಡುವ ಸಂದರ್ಭದಲ್ಲಿ ಚಿರತೆ ಅವರ ಮೇಲೆಯೂ ದಾಳಿ ಮಾಡಿ ಕುತ್ತಿಗೆ ಹಾಗೂ ತಲೆಯ ಹಿಂಭಾಗಕ್ಕೆ ಗಾಯಗೊಳಿಸಿ ಅಲ್ಲಿಂದ ಓಡಿ ಹೋಗಿ ಹೋಯಿತು.</p>.<p>ವೀರನಪುರ ಗ್ರಾಮಕ್ಕೆ ಸಮೀಪದಲ್ಲಿರುವ ಹಳೇಪುರ ಗ್ರಾಮದಲ್ಲಿ ಕೊಟ್ಟಿಗೆಯೊಂದರಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಹಸುವಿನ ಮಾಲೀಕ ಸಿದ್ದರಾಜು ಅವರು ಚಿರತೆ ಮೇಲೆ ಬ್ಯಾಟರಿ ಲೈಟ್ ಬೆಳಕನ್ನು ಹಾಯಿಸುತ್ತಿದ್ದಂತೆ ಚಿರತೆ ಅವರತ್ತ ನೆಗೆದಿದೆ. ಸಿದ್ದರಾಜು ಅವರ ಎಡ ಭುಜ ಹಾಗೂ ಬೆನ್ನಿಗೆ ಏಟಾಗಿದೆ.</p>.<p>ತಕ್ಷಣವೇ ಮೂವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪ್ರಾಣಕ್ಕೂ ಅಪಾಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<p class="Subhead"><strong>ಸೆರೆಗೆ ಕಾರ್ಯಾಚರಣೆ:</strong> ಈ ಮಧ್ಯೆ, ದಾಳಿ ನಡೆಸಿದ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.</p>.<p>‘ಹಳೇಪುರ, ವೀರನಪುರದ ಸುತ್ತಮುತ್ತ ಐದು ಬೋನುಗಳನ್ನು ಇಡಲಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ವಲಯ ಅರಣ್ಯ ಅಧಿಕಾರಿ ಅಭಿಲಾಷ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead"><strong>ಮೂರ್ನಾಲ್ಕು ತಿಂಗಳಿಂದ ಹಾವಳಿ</strong></p>.<p>‘ವೀರನಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಮೂರ್ನಾಲ್ಕು ತಿಂಗಳುಗಳಿಂದ ಚಿರತೆಗಳ ಹಾವಳಿ ಜೋರಾಗಿದೆ. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇವೆ. ಅರಣ್ಯ ಇಲಾಖೆ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮದ ಪ್ರದೀಪ್ ದೂರಿದರು.</p>.<p>ಈ ಭಾಗದಲ್ಲಿ ಹಲವು ಕಲ್ಲಿನ ಕ್ವಾರಿಗಳಿದ್ದು, ಅಲ್ಲಿ ಚಿರತೆಗಳು ಆಶ್ರಯ ಪಡೆಯುತ್ತಿವೆ. ಗ್ರಾಮದ ಸುತ್ತಮುತ್ತಮೂರ್ನಾಲ್ಕು ಚಿರತೆಗಳು ಓಡಾಡುತ್ತಿವೆ. ಇನ್ನಾದರೂ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>