<p><strong>ಚಾಮರಾಜನಗರ:</strong> ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರನ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನ ಮೇಲೆ ಬುಧವಾರ ಬೆಳಿಗ್ಗೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.</p><p>ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಮೃತರು. </p><p>ಗ್ರಾಮದವರ ಜೊತೆ ಮಲೆ ಮಾದಪ್ಪನ ದರ್ಶನ ಮಾಡಲು ಬಂದಿದ್ದ ಪ್ರವೀಣ್ ತಾಳುಬೆಟ್ಟದಿಂದ ಮಲೆಮಹದೇಶ್ವರನ ಬೆಟ್ಟದವರೆಗೆ ಕಾಲ್ನಡಿಗೆಯಲ್ಲಿ ಹೋಗುವಾಗ ಚಿರತೆ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ಮರ್ಮಾಂಗಕ್ಕೆ ಗಂಭೀರ ಪೆಟ್ಟಾಗಿದ್ದು ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ.</p><p>ಪ್ರವೀಣ್ ಅವರೊಂದಿಗಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಕಾಡಿನೊಳಗೆ ಓಡಿಸಿದ್ದಾರೆ. </p><p>ಮಲೆ ಮಹದೇಶ್ವರನ ದೇವಸ್ಥಾನದ ಸಮೀಪ ಚಿರತೆ ದಾಳಿ ನಡೆಸಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರನ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನ ಮೇಲೆ ಬುಧವಾರ ಬೆಳಿಗ್ಗೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.</p><p>ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಮೃತರು. </p><p>ಗ್ರಾಮದವರ ಜೊತೆ ಮಲೆ ಮಾದಪ್ಪನ ದರ್ಶನ ಮಾಡಲು ಬಂದಿದ್ದ ಪ್ರವೀಣ್ ತಾಳುಬೆಟ್ಟದಿಂದ ಮಲೆಮಹದೇಶ್ವರನ ಬೆಟ್ಟದವರೆಗೆ ಕಾಲ್ನಡಿಗೆಯಲ್ಲಿ ಹೋಗುವಾಗ ಚಿರತೆ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ಮರ್ಮಾಂಗಕ್ಕೆ ಗಂಭೀರ ಪೆಟ್ಟಾಗಿದ್ದು ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ.</p><p>ಪ್ರವೀಣ್ ಅವರೊಂದಿಗಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಕಾಡಿನೊಳಗೆ ಓಡಿಸಿದ್ದಾರೆ. </p><p>ಮಲೆ ಮಹದೇಶ್ವರನ ದೇವಸ್ಥಾನದ ಸಮೀಪ ಚಿರತೆ ದಾಳಿ ನಡೆಸಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>