<p><strong>ಹನೂರು (ಚಾಮರಾಜನಗರ ಜಿಲ್ಲೆ):</strong> ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ತಾಲ್ಲೂಕಿನ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತರೊಬ್ಬರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿಯ ಪ್ರವೀಣ್ (33) ಮೃತರು.</p><p>ಬುಧವಾರ ಬೆಳಗಿನ ಜಾವ ಗ್ರಾಮದ ಆರು ಮಂದಿ ತಾಳುಬೆಟ್ಟದಿಂದ ಸುಮಾರು 7 ಕಿ.ಮೀ. ದೂರವಿರುವ ಮಲೆ ಮಹದೇಶ್ವರ ಸನ್ನಿಧಿಗೆ ಪಾದಯಾತ್ರೆಯಲ್ಲಿ ಹೋಗುವಾಗ ‘ರಂಗಸ್ವಾಮಿ ಒಡ್ಡು’ ಸಮೀಪದಲ್ಲಿ ಚಿರತೆ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ಮರ್ಮಾಂಗವನ್ನು ಕಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು. ಜೊತೆಗಿದ್ದವರು ಓಡಿ ಪಾರಾಗಿದ್ದಾರೆ.</p><p>ಮಲೆ ಮಹದೇಶ್ವರ ವನ್ಯಧಾಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಕಾಡಿಗಟ್ಟಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.</p><p>ಜಾತ್ರಾ ಮಹೋತ್ಸವ ಹಾಗೂ ಅಮಾವಾಸ್ಯೆ ದಿನಗಳಲ್ಲಿ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ಬಂದು ಹರಕೆ ಸಲ್ಲಿಸುವುದು ರೂಢಿಯಲ್ಲಿದೆ. ಈಗ, ಚಿರತೆ ದಾಳಿಯಿಂದ ಭಕ್ತರು ಆತಂಕಗೊಂಡಿದ್ದು, ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ.</p><p><strong>ಪಾದಯಾತ್ರೆಗೆ ನಿರ್ಬಂಧ: </strong>ಘಟನೆ ಹಿನ್ನಲೆಯಲ್ಲಿ ತಾಳುಬೆಟ್ಟದಿಂದ ದೇಗುಲದವರೆಗೆ ಪಾದಯಾತ್ರೆ, ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಜ.24ರವರೆಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ.</p><p>‘ಸುರಕ್ಷತೆಯ ದೃಷ್ಟಿಯಿಂದ ಭಕ್ತರು ಬಸ್ ಹಾಗೂ ನಾಲ್ಕುಚಕ್ರದ ವಾಹನಗಳಲ್ಲಿ ಬೆಟ್ಟಕ್ಕೆ ತೆರಳಬೇಕು’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು (ಚಾಮರಾಜನಗರ ಜಿಲ್ಲೆ):</strong> ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ತಾಲ್ಲೂಕಿನ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತರೊಬ್ಬರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿಯ ಪ್ರವೀಣ್ (33) ಮೃತರು.</p><p>ಬುಧವಾರ ಬೆಳಗಿನ ಜಾವ ಗ್ರಾಮದ ಆರು ಮಂದಿ ತಾಳುಬೆಟ್ಟದಿಂದ ಸುಮಾರು 7 ಕಿ.ಮೀ. ದೂರವಿರುವ ಮಲೆ ಮಹದೇಶ್ವರ ಸನ್ನಿಧಿಗೆ ಪಾದಯಾತ್ರೆಯಲ್ಲಿ ಹೋಗುವಾಗ ‘ರಂಗಸ್ವಾಮಿ ಒಡ್ಡು’ ಸಮೀಪದಲ್ಲಿ ಚಿರತೆ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ಮರ್ಮಾಂಗವನ್ನು ಕಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು. ಜೊತೆಗಿದ್ದವರು ಓಡಿ ಪಾರಾಗಿದ್ದಾರೆ.</p><p>ಮಲೆ ಮಹದೇಶ್ವರ ವನ್ಯಧಾಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಕಾಡಿಗಟ್ಟಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.</p><p>ಜಾತ್ರಾ ಮಹೋತ್ಸವ ಹಾಗೂ ಅಮಾವಾಸ್ಯೆ ದಿನಗಳಲ್ಲಿ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ಬಂದು ಹರಕೆ ಸಲ್ಲಿಸುವುದು ರೂಢಿಯಲ್ಲಿದೆ. ಈಗ, ಚಿರತೆ ದಾಳಿಯಿಂದ ಭಕ್ತರು ಆತಂಕಗೊಂಡಿದ್ದು, ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ.</p><p><strong>ಪಾದಯಾತ್ರೆಗೆ ನಿರ್ಬಂಧ: </strong>ಘಟನೆ ಹಿನ್ನಲೆಯಲ್ಲಿ ತಾಳುಬೆಟ್ಟದಿಂದ ದೇಗುಲದವರೆಗೆ ಪಾದಯಾತ್ರೆ, ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಜ.24ರವರೆಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ.</p><p>‘ಸುರಕ್ಷತೆಯ ದೃಷ್ಟಿಯಿಂದ ಭಕ್ತರು ಬಸ್ ಹಾಗೂ ನಾಲ್ಕುಚಕ್ರದ ವಾಹನಗಳಲ್ಲಿ ಬೆಟ್ಟಕ್ಕೆ ತೆರಳಬೇಕು’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>