ಹನೂರು (ಚಾಮರಾಜನಗರ): ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ, ತಾಲ್ಲೂಕಿನ ಗುರುಮಲ್ಲಪ್ಪನದೊಡ್ಡಿ ರಸ್ತೆಯಲ್ಲಿ ಸೋಮವಾರ ರಾತ್ರಿ ವಾಹನವೊಂದು ಡಿಕ್ಕಿ ಹೊಡೆದು ಗಂಡು ಚಿರತೆ ಮೃತಪಟ್ಟಿದೆ.
ಲೊಕ್ಕನಹಳ್ಳಿಯಿಂದ ತಮಿಳುನಾಡಿನ ಸತ್ಯಮಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಿಆರ್ಟಿಯ ಬೈಲೂರು ವಲಯದ ಸಿಬ್ಬಂದಿ ಪರಿಶೀಲನೆ ನಡೆಸಿದರು.