<p><strong>ಯಳಂದೂರು</strong>: ತಾಲ್ಲೂಕಿನ ಕೆಸ್ತೂರು ಗ್ರಾಮದ ಹೊರವಲಯದ ಚೆನ್ನಯ್ಯನ ಕಟ್ಟೆ ಬಳಿ ಮಂಗಳವಾರ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು. ಕೃಷಿಕರಲ್ಲಿ ಆತಂಕ ಮೂಡಿಸಿದೆ.</p>.<p>ಗ್ರಾಮಸ್ಥರು ಹೆಜ್ಜೆ ಗುರುತು ಪರಿಶೀಲಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗಸ್ತು ಪಡೆ ಚಿರತೆ ಚಲನವಲನಗಳ ಮೇಲೆ ಕಣ್ಣಿಟ್ಟಿದೆ.</p>.<p>‘ಇಲ್ಲಿನ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತು ಮೂಡಿದೆ. ಹಾಗಾಗಿ, ರೈತರು ಜಮೀನುಗಳಿಗೆ ರಾತ್ರಿ ವೇಳೆ ಸಂಚರಿಸಬಾರದು. ಚಿರತೆ ಸಂಚರಿಸುವುದು ಕಂಡುಬಂದರೆ ಆತಂಕಕ್ಕೆ ಒಳಗಾಗದೆ ಮಾಹಿತಿ ನೀಡಬಹುದು’ ಎಂದು ಉಪ ವಲಯ ಅರಣ್ಯಾಧಿಕಾರಿ ಲಕ್ಷ್ಮಣ್ ಹೇಳಿದರು.</p>.<p>ಅರಣ್ಯ ಅಧಿಕಾರಿಗಳಾದ ಡಿ.ಕೆ.ಮಧು, ವೀಕ್ಷಕ ಚಂದ್ರಶೇಖರ್, ಗಸ್ತು ಪಡೆಯ ಪ್ರಭುಸ್ವಾಮಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಕೆಸ್ತೂರು ಗ್ರಾಮದ ಹೊರವಲಯದ ಚೆನ್ನಯ್ಯನ ಕಟ್ಟೆ ಬಳಿ ಮಂಗಳವಾರ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು. ಕೃಷಿಕರಲ್ಲಿ ಆತಂಕ ಮೂಡಿಸಿದೆ.</p>.<p>ಗ್ರಾಮಸ್ಥರು ಹೆಜ್ಜೆ ಗುರುತು ಪರಿಶೀಲಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗಸ್ತು ಪಡೆ ಚಿರತೆ ಚಲನವಲನಗಳ ಮೇಲೆ ಕಣ್ಣಿಟ್ಟಿದೆ.</p>.<p>‘ಇಲ್ಲಿನ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತು ಮೂಡಿದೆ. ಹಾಗಾಗಿ, ರೈತರು ಜಮೀನುಗಳಿಗೆ ರಾತ್ರಿ ವೇಳೆ ಸಂಚರಿಸಬಾರದು. ಚಿರತೆ ಸಂಚರಿಸುವುದು ಕಂಡುಬಂದರೆ ಆತಂಕಕ್ಕೆ ಒಳಗಾಗದೆ ಮಾಹಿತಿ ನೀಡಬಹುದು’ ಎಂದು ಉಪ ವಲಯ ಅರಣ್ಯಾಧಿಕಾರಿ ಲಕ್ಷ್ಮಣ್ ಹೇಳಿದರು.</p>.<p>ಅರಣ್ಯ ಅಧಿಕಾರಿಗಳಾದ ಡಿ.ಕೆ.ಮಧು, ವೀಕ್ಷಕ ಚಂದ್ರಶೇಖರ್, ಗಸ್ತು ಪಡೆಯ ಪ್ರಭುಸ್ವಾಮಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>