ಜೂನ್ 18ರಂದು ಗ್ರಾಮದ ಪಾಳುಬಾವಿಯೊಳಗೆ ಬಿದ್ದಿದ್ದ ಚಿರತೆಯನ್ನು ಮೇಲೆತ್ತಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಹಾಸ ಪಟ್ಟಿದ್ದರು. ಚಿರತೆ ಬಾವಿಯೊಳಗಿನ ಪೊಟರೆಯೊಳಗೆ ಸೇರಿಕೊಂಡಿದ್ದರಿಂದ ರಕ್ಷಣಾ ಕಾರ್ಯಕ್ಕೆ ತೊಡಕಾಗಿತ್ತು. ಆದ್ದರಿಂದ ಅಧಿಕಾರಿಗಳು ಕ್ಯಾಮೆರಾ ಅಳವಡಿಸಿ ಬೋನು ಇಟ್ಟಿದ್ದರು. ಜೊತೆಗೆ ಏಣಿಯನ್ನೂ ಇಡಲಾಗಿತ್ತು.