ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಮ್ಮನಹಳ್ಳಿ: ಬೋನಿಗೆ ಬಿದ್ದ ಚಿರತೆ

Last Updated 16 ಮೇ 2021, 2:38 IST
ಅಕ್ಷರ ಗಾತ್ರ

ಗುಂಡ್ಲುಪೇಟೆ:ತಾಲ್ಲೂಕಿನ ಬೊಮ್ಮನಹಳ್ಳಿ ಸುತ್ತಮುತ್ತ ಹಲವು ದಿನಗಳಿಂದ ಪ್ರಾಣಿಗಳ ಮೇಲೆ ದಾಳಿ ನಡೆಸಿ ಭಯ ಉಂಟುಮಾಡಿದ್ದ ಚಿರತೆ ಶನಿವಾರ ಬೋನಿಗೆ ಬಿದ್ದಿದೆ.

ಬೊಮ್ಮನಹಳ್ಳಿ ಗ್ರಾಮದ ಜಮೀನುಗಳಿಗೆ ನುಗ್ಗಿ ಹಸು, ಕುರಿ, ನಾಯಿ ಸೇರಿದಂತೆ ಸಾಕು ಪ್ರಾಣಿಗಳು ಹಾಗೂ ಜನರ ಮೇಲೆ ಚಿರತೆ ದಾಳಿ ಮಾಡುತ್ತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆ ಸೆರೆಗಾಗಿ ಮಹದೇವಪ್ಪ ಎಂಬುವವರ ಜಮೀನಿನಲ್ಲಿ ಬೋನು ಇಟ್ಟಿದ್ದರು.

‘ಎರಡು ತಿಂಗಳ ಅಂತರದಲ್ಲಿ ಮಹದೇವಪ್ಪ ಅವರ ಜಮೀನಿನಲ್ಲಿ ಎರಡು ಚಿರತೆಗಳು ಸೆರೆಯಾಗಿವೆ. ಶನಿವಾರ ಬೋನಿಗೆ ಬಿದ್ದಿರುವ ಗಂಡು ಚಿರತೆಗೆ ಅಂದಾಜು 5 ವರ್ಷ ವಯಸ್ಸಾಗಿರಬಹುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆರೆಯಾದ ಚಿರತೆಯನ್ನು ಮೂಲೆಹೊಳೆ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT