ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಈಗಾಗಲೇ ಬಿಜೆಪಿ ವಿರುದ್ಧ ಜನರು ದಂಗೆ ಎದಿದ್ದಾರೆ. ಹಾಗಾಗಿ ಬಿಜೆಪಿ ಪಕ್ಷದ ಆಟ ಇನ್ನು ಮುಂದೆ ನಡೆಯುವುದಿಲ್ಲ. ಈ ಬಾರಿ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಈ ಬಾರಿ ಜನರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದರಲ್ಲಿ ಅನುಮಾನವೇ ಇಲ್ಲ. ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಜನರು ನೆನಪಾಗುತ್ತಾರೆ. ಇಲ್ಲದಿದ್ದರೆ ಯಾವ ಸಂದರ್ಭದಲ್ಲಿಯೂ ಇವರಿಗೆ ಯಾರೂ ನೆನಪಾಗುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಬಹಳ ಅನ್ಯಾಯ ಮಾಡಿದೆ. ಅದು ಈಗಾಗಲೇ ರಾಜ್ಯದ ಜನರಿಗೆ ಗೊತ್ತಿದೆ. ಬಿಜೆಪಿಯವರಿಗೆ ಈ ಬಾರಿ ನಮ್ಮ ರಾಜ್ಯದಲ್ಲಿ ಸೋಲು ಖಚಿತ’ ಎಂದರು.