‘ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ್ದೇವೆ. ವಾಹನಗಳ ದಾಖಲೆಗಳನ್ನು ಪರಿಶೀಲಿಸಿ ನಂತರ ಅವರಿಗೆ ನೀಡುತ್ತೇವೆ. ಹೀಗಿದ್ದರೂ ಜನರು ಅನಗತ್ಯವಾಗಿ ಓಡಾಡಿದರೆ, ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲು ಚಿಂತಿಸುತ್ತಿದ್ದೇವೆ’ ಎಂದು ಅವರು ಹೇಳಿದರು.
ಮಂಡಿಯೂರಿಸಿ ಪಾಠ: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರು ಶನಿವಾರ ರಾತ್ರಿ ನಗರದಲ್ಲಿ ದ್ವಿಚಕ್ರವಾಹನಗಳಲ್ಲಿ ಸುತ್ತಾಡುತ್ತಿದ್ದ ಹಲವರನ್ನು ಭುವನೇಶ್ವರಿ ವೃತ್ತದಲ್ಲಿ ವೃತ್ತಾಕಾರವಾಗಿ ಮಂಡಿಯೂರಿ ಕುಳಿತುಕೊಳ್ಳುವಂತೆ ಮಾಡಿ, ಗಿಗ್ಬಂಧನದ ಸಂದರ್ಭದಲ್ಲಿ ಸರ್ಕಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಾಠ ಮಾಡಿದ್ದಾರೆ. ಇನ್ನು ಮುಂದೆ ಅನಗತ್ಯವಾಗಿ ಓಡಾಡುವುದಿಲ್ಲ ಎಂದು ಅವರಿಂದ ಪ್ರತಿಜ್ಞೆಯನ್ನೂ ಮಾಡಿಸಿಕೊಂಡಿದ್ದಾರೆ.