ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಜಿಲ್ಲೆಯ ನ್ಯಾಯಾಲಯಗಳಲ್ಲಿ 20,148 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಅದಾಲತ್ಗೆ 7,303 ಪ್ರಕರಣಗಳನ್ನು ಗುರುತಿಸಲಾಗಿತ್ತು. ಈ ಪೈಕಿ ಶೇ 49.06ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ₹8.19 ಕೋಟಿ ಮೊತ್ತದ ಪರಿಹಾರವನ್ನು ಕೊಡಿಸಲಾಗಿದೆ’ ಎಂದು ಹೇಳಿದರು.