‘ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು (ಪಿಐಎಲ್) ಬಿಟ್ಟು ಇತರ ಯಾವುದೇ ರೀತಿಯ ಸಿವಿಲ್ ಪ್ರಕರಣಗಳು (ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳು), ವಾಹನ ಅಪಘಾತದ ಪ್ರಕರಣಗಳು, ಕೈಗಾರಿಕಾ ವಿವಾದ ಕಾಯ್ದೆ ವ್ಯಾಪ್ತಿಯ ಪ್ರಕರಣಗಳು, ದಂಡ ಪ್ರಕ್ರಿಯಾ ಸಂಹಿತೆ ಕಲಂ 320(1) ಮತ್ತು 320(2) ರಡಿಯಲ್ಲಿ ರಾಜಿ ಮಾಡುವ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಕಾರ್ಮಿಕ ಕಾಯ್ದೆ ಅಡಿಯ ಪ್ರಕರಣಗಳು, ವಿದ್ಯುಡತ್ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣಗಳು, ಕಲ್ಲು, ಮರಳು ಅಕ್ರಮ ಸಾಗಣೆಗೆ ಸಂಬಂಧಿಸಿದ ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸಬಹುದಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ವಿಲೇವಾರಿ ಮಾಡಬಹುದಾಗಿದೆ’ ಎಂದು ಹೇಳಿದರು.