<p><strong>ಚಾಮರಾಜನಗರ:</strong> ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣವಿದ್ದು, ಪಕ್ಷದ ಅಭ್ಯರ್ಥಿ ಸುನಿಲ್ಬೋಸ್ ಅವರಿಗೆ ನಂಜನಗೂಡು ಕ್ಷೇತ್ರದಲ್ಲಿ ಹೆಚ್ಚು ಮತ ಸಿಗಲಿವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಹೆಗ್ಗವಾಡಿಯಯಲ್ಲಿ ಸಹೋದರ ಧೀರನ್, ಪಕ್ಷದ ಮುಖಂಡರೊಂದಿಗೆ ಸರತಿ ಹಕ್ಕು ಚಲಾಯಿಸಿದ ನಂತರ ಮಾತನಾಡಿದ ಅವರು, ‘ದೇಶದಲ್ಲಿ ಅಭಿವೃದ್ದಿ ಬಯಸಿ, ಬದಲಾವಣೆ ಬಯಸಿ ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕರೆದೊಯ್ಯುವ ಒಳ್ಳೆಯ ವ್ಯವಸ್ಥೆಗೆ ನಾವು ಮತದಾನ ಮಾಡಿದ್ದೇವೆ’ ಎಂದರು.</p>.<p>‘ಚಾಮರಾಜನಗರ ಲೋಕಸಭಾ ಕ್ಷೇತ್ರ ಹಿಂದೆ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ಆ ರೀತಿ ಮತ್ತೊಮ್ಮೆ ಅವಕಾಶ ಬಂದಿದೆ. ನಮ್ಮ ತಂದೆ ಇಲ್ಲಿ ಎರಡು ಬಾರಿ ಸಂಸದರಾಗಿದ್ದರು. ಕಳೆದ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಿ ಸೋತರು. ಈ ಬಾರಿ ಜನರಿಗೆ ಒಳ್ಳೆಯ ಅವಕಾಶ ಸಿಗುತ್ತಿದೆ. ಜನ ಬದಲಾವಣೆ ಬಯಸಿ ಉತ್ತಮ ನಿರ್ಧಾರ ತಗೆದುಕೊಳ್ಳಲಿದ್ದಾರೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರೇವಣ್ಣ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ರಾಜೇಶ ಗೌಡಹಳ್ಳಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣವಿದ್ದು, ಪಕ್ಷದ ಅಭ್ಯರ್ಥಿ ಸುನಿಲ್ಬೋಸ್ ಅವರಿಗೆ ನಂಜನಗೂಡು ಕ್ಷೇತ್ರದಲ್ಲಿ ಹೆಚ್ಚು ಮತ ಸಿಗಲಿವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಹೆಗ್ಗವಾಡಿಯಯಲ್ಲಿ ಸಹೋದರ ಧೀರನ್, ಪಕ್ಷದ ಮುಖಂಡರೊಂದಿಗೆ ಸರತಿ ಹಕ್ಕು ಚಲಾಯಿಸಿದ ನಂತರ ಮಾತನಾಡಿದ ಅವರು, ‘ದೇಶದಲ್ಲಿ ಅಭಿವೃದ್ದಿ ಬಯಸಿ, ಬದಲಾವಣೆ ಬಯಸಿ ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕರೆದೊಯ್ಯುವ ಒಳ್ಳೆಯ ವ್ಯವಸ್ಥೆಗೆ ನಾವು ಮತದಾನ ಮಾಡಿದ್ದೇವೆ’ ಎಂದರು.</p>.<p>‘ಚಾಮರಾಜನಗರ ಲೋಕಸಭಾ ಕ್ಷೇತ್ರ ಹಿಂದೆ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ಆ ರೀತಿ ಮತ್ತೊಮ್ಮೆ ಅವಕಾಶ ಬಂದಿದೆ. ನಮ್ಮ ತಂದೆ ಇಲ್ಲಿ ಎರಡು ಬಾರಿ ಸಂಸದರಾಗಿದ್ದರು. ಕಳೆದ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಿ ಸೋತರು. ಈ ಬಾರಿ ಜನರಿಗೆ ಒಳ್ಳೆಯ ಅವಕಾಶ ಸಿಗುತ್ತಿದೆ. ಜನ ಬದಲಾವಣೆ ಬಯಸಿ ಉತ್ತಮ ನಿರ್ಧಾರ ತಗೆದುಕೊಳ್ಳಲಿದ್ದಾರೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರೇವಣ್ಣ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ರಾಜೇಶ ಗೌಡಹಳ್ಳಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>