ಮತದಾನ ಬಹಿಷ್ಕಾರದ ವಿಚಾರದಲ್ಲಿ ಇಂಡಿಗನತ್ತ, ಮೆಂದಾರೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಉಂಟಾದ ಘರ್ಷಣೆ ಸಂದರ್ಭದಲ್ಲಿ ಉದ್ರಿಕ್ತರು, ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೇ ಒಳಗ್ಗೆ ನುಗ್ಗಿ ಇನ್ನಿತರ ಪರಿಕರಗಳನ್ನು ಕೆಳಕ್ಕೆ ಎಸೆದು ಹಾನಿ ಮಾಡಿದ್ದರು. ಇವಿಎಂಗೆ ಬೆಂಕಿ ಹಚ್ಚಲೂ ಯತ್ನಿಸಿದ್ದರು.