<p><strong>ಗುಂಡ್ಲುಪೇಟೆ:</strong> ಲೋಕಸಭಾ ಚುನಾವಣೆಯ ಅಂಗವಾಗಿ ತಾಲ್ಲೂಕಿನಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಬಿಸಿಲಿನ ನಡುವೆಯೂ ಜನರು ಮತಗಟ್ಟೆಗೆ ಆಗಮಿಸಿ ಸರದಿಯಲ್ಲಿ ನಿಂತು ಮತದಾನ ಮಾಡಿದರು.</p>.<p>ತಾಲ್ಲೂಕಿನ ತೆರಕಣಾಂಬಿಹುಂಡಿ ಮತಗಟ್ಟೆ ಸಂಖ್ಯೆ-107, ಮಲ್ಲಮ್ಮನಹುಂಡಿ ಮತಗಟ್ಟೆ ಸಂಖ್ಯೆ-99, ಮಂಗಲ ಮತಗಟ್ಟೆ ಸಂಖ್ಯೆ-141, ಏಲಚೆಟ್ಟಿ ಮತಗಟ್ಟೆ ಸಂಖ್ಯೆ-64, ಕಳ್ಳಿಪುರ ಮತಗಟ್ಟೆ ಸಂಖ್ಯೆ-171, ಹೊಂಗಹಳ್ಳಿ ಮತಗಟ್ಟೆ ಸಂಖ್ಯೆ-182 ರಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ಕೆಲ ಕಾಲ ಮತದಾನ ಸ್ಥಗಿತಗೊಳಿಸಿ, ನಂತರ ವಿವಿ ಪ್ಯಾಟ್ ಬದಲಾವಣೆ ಮಾಡಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p>ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಅವರು ತನ್ನ ಕುಟುಂಬದವರೊಡನೆ ಬಂದು ಸ್ವಗ್ರಾಮ ಹಾಲಹಳ್ಳಿಯಲ್ಲಿ ಮತದಾನ ಮಾಡಿದರು. ಮಾಜಿ ಸಚಿವೆ ಗೀತಾ ಮಹದೇವ ಪ್ರಸಾದ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಜೊತೆಯಾದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಚೌಡಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ತೆರಳಿ ಮತ ಚಲಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಲೋಕಸಭಾ ಚುನಾವಣೆಯ ಅಂಗವಾಗಿ ತಾಲ್ಲೂಕಿನಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಬಿಸಿಲಿನ ನಡುವೆಯೂ ಜನರು ಮತಗಟ್ಟೆಗೆ ಆಗಮಿಸಿ ಸರದಿಯಲ್ಲಿ ನಿಂತು ಮತದಾನ ಮಾಡಿದರು.</p>.<p>ತಾಲ್ಲೂಕಿನ ತೆರಕಣಾಂಬಿಹುಂಡಿ ಮತಗಟ್ಟೆ ಸಂಖ್ಯೆ-107, ಮಲ್ಲಮ್ಮನಹುಂಡಿ ಮತಗಟ್ಟೆ ಸಂಖ್ಯೆ-99, ಮಂಗಲ ಮತಗಟ್ಟೆ ಸಂಖ್ಯೆ-141, ಏಲಚೆಟ್ಟಿ ಮತಗಟ್ಟೆ ಸಂಖ್ಯೆ-64, ಕಳ್ಳಿಪುರ ಮತಗಟ್ಟೆ ಸಂಖ್ಯೆ-171, ಹೊಂಗಹಳ್ಳಿ ಮತಗಟ್ಟೆ ಸಂಖ್ಯೆ-182 ರಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ಕೆಲ ಕಾಲ ಮತದಾನ ಸ್ಥಗಿತಗೊಳಿಸಿ, ನಂತರ ವಿವಿ ಪ್ಯಾಟ್ ಬದಲಾವಣೆ ಮಾಡಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p>ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಅವರು ತನ್ನ ಕುಟುಂಬದವರೊಡನೆ ಬಂದು ಸ್ವಗ್ರಾಮ ಹಾಲಹಳ್ಳಿಯಲ್ಲಿ ಮತದಾನ ಮಾಡಿದರು. ಮಾಜಿ ಸಚಿವೆ ಗೀತಾ ಮಹದೇವ ಪ್ರಸಾದ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಜೊತೆಯಾದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಚೌಡಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ತೆರಳಿ ಮತ ಚಲಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>