<p><strong>ಚಾಮರಾಜನಗರ:</strong> ನಗರಸಭೆಯಲ್ಲಿ ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬ, ಇ–ಸ್ವತ್ತು ನೀಡಲು ಹಣಕ್ಕೆ ಬೇಡಿಕೆ, ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿ ವೈಫಲ್ಯ ಸೇರಿದಂತೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದ ತಂಡ ದಿನವಿಡೀ ಕಡತಗಳ ಪರೀಶಿಲನೆ ನಡೆಸಿತು. </p>.<p>ಬೆಳಿಗ್ಗೆ 10.30ಕ್ಕೆ ನಗರಸಭೆ ಕಚೇರಿ ಪ್ರವೇಶಿಸಿದ ಲೋಕಾಯುಕ್ತ ಅಧಿಕಾರಿಗಳು ಕತ್ತಲಾದರೂ ಕಡತಗಳ ಪರಿಶೀಲನೆ ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವುದರಲ್ಲಿ ಮಗ್ನರಾಗಿದ್ದರು. ಸಾರ್ವಜನಿಕರು ನಗರಸಭೆ ಅಧಿಕಾರಿಗಳ ಕಾರ್ಯ ವೈಖರಿಯ ವಿರುದ್ಧ ಲೋಕಾಯುಕ್ತರಿಗೆ ಲಿಖಿತ ದೂರು ಸಲ್ಲಿಸಿದರು. </p>.<p>ನಗರದ ಸ್ವಚ್ಛತೆ ಕಾಪಾಡಲು, ಕುಡಿಯುವ ನೀರಿನ ಸೌಲಭ್ಯ ಒದಗಿಸಲು, ರಸ್ತೆಗಳ ದುರಸ್ತಿ, ಚರಂಡಿಗಳ ಸ್ವಚ್ಛತೆ, ಕಸ ವಿಲೇವಾರಿ, ಉದ್ಯಾನಗಳ ನಿರ್ವಹಣೆ, ಬೀದಿದೀಪಗಳ ದುರಸ್ತಿ ಸೇರಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ನಾಗರಿಕರು ದೂರು ಸಲ್ಲಿಸಿದರು. </p>.<p>ನಗರಸಭೆಯ ಕಂದಾಯ, ಆರೋಗ್ಯ, ಹಣಕಾಸು, ಸ್ವಚ್ಛತೆ, ಇ ಸ್ವತ್ತು ವಿಲೇವಾರಿ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿನೀಡಿದ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದರು. ಈ ಸಂದರ್ಭ ಸ್ಥಳದಲ್ಲಿ ಹಾಜರಿದ್ದ ನಗರಸಭೆ ಪೌರಾಯುಕ್ತ ಎಸ್.ಎ.ರಾಮದಾಸ್ ಸಹಿತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.</p>.<p>ಇ ಸ್ವತ್ತು ವಿತರಣೆ, ಕಡತಗಳ ವಿಲೇವಾರಿ ಹಾಗೂ ನಿರ್ವಹಣೆಯಲ್ಲಿ ಗಂಭೀರವಾದ ಲೋಪ–ದೋಷಗಳು ಕಂಡುಬಂದಿದ್ದು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಬುದ್ಧ ನಗರದ ವಾಟರ್ ಟ್ಯಾಂಕ್ ಪಕ್ಕದಲ್ಲಿ ಸಾಧು ಚಾರಿಟಬಲ್ ಟ್ರಸ್ಟ್ ಹೆಸರಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಟ್ರಸ್ಟ್ ಅಧ್ಯಕ್ಷರ ಹೆಸರಿಗೆ ಖಾತೆ ಮಾಡಿಕೊಡಲಾಗಿದ್ದು ತನಿಖೆ ನಡೆಸಿ ಖಾತೆ ರದ್ದುಪಡಿಸಬೇಕು ಎಂದು ಹೋರಾಟಗಾರ ಭಾನುಪ್ರಕಾಶ್ ಮನವಿ ನೀಡಿದರು.</p>.<p>ಇದೇ ವೇಳೆ ಬುದ್ಧನಗರದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ, ಕಸ ವಿಲೇವಾರಿ ಮಾಡುವಂತೆ, ಶುಚಿತ್ವಕ್ಕೆ ಒತ್ತು ನೀಡುವಂತೆ ನಿವಾಸಿಗಳು ಮನವಿ ನೀಡಿದರು.</p>.<p>ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಲೋಹಿತ್ ಕುಮಾರ್, ಗಿರೀಶ್, ಶಶಿಕುಮಾರ್, ರವಿಕುಮಾರ್ ಇದ್ದರು.</p>. <p><strong>ಅಕ್ರಮವಾಗಿ ಇ–ಸ್ವತ್ತು</strong>: ಕ್ರಮಕ್ಕೆ ಆಗ್ರಹ ಪ್ರಗತಿ ನಗರದಲ್ಲಿ ಪರಿಶಿಷ್ಟ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಪಕ್ಕದಲ್ಲಿರುವ ಸಾರ್ವಜನಿಕ ರಸ್ತೆಗೆ ಮೀಸಲಿರಿಸಿದ ಜಾಗವನ್ನು ಡಿ.31 2022ರಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ನಗರಸಭೆಯಿಂದ ಇ–ಸ್ವತ್ತು ಮಾಡಿಕೊಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು ತನಿಖೆ ನಡೆಸಿ ಇ ಸ್ವತ್ತು ರದ್ದುಗೊಳಿಸಿ ಜಾಗವನ್ನು ಸಾರ್ವಜನಿಕ ಬಳಕೆಯ ಉದ್ದೇಶಕ್ಕೆ ನೀಡಬೇಕು. ಅಕ್ರಮವಾಗಿ ಇ–ಸ್ವತ್ತು ನೀಡಿರುವ ಅಧಿಕಾರಿಗಳು ಹಾಗೂ ಇ–ಸ್ವತ್ತು ಪಡೆದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೋರಾಟಗಾರ ಭಾನುಪ್ರಕಾಶ್ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಗರಸಭೆಯಲ್ಲಿ ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬ, ಇ–ಸ್ವತ್ತು ನೀಡಲು ಹಣಕ್ಕೆ ಬೇಡಿಕೆ, ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿ ವೈಫಲ್ಯ ಸೇರಿದಂತೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದ ತಂಡ ದಿನವಿಡೀ ಕಡತಗಳ ಪರೀಶಿಲನೆ ನಡೆಸಿತು. </p>.<p>ಬೆಳಿಗ್ಗೆ 10.30ಕ್ಕೆ ನಗರಸಭೆ ಕಚೇರಿ ಪ್ರವೇಶಿಸಿದ ಲೋಕಾಯುಕ್ತ ಅಧಿಕಾರಿಗಳು ಕತ್ತಲಾದರೂ ಕಡತಗಳ ಪರಿಶೀಲನೆ ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವುದರಲ್ಲಿ ಮಗ್ನರಾಗಿದ್ದರು. ಸಾರ್ವಜನಿಕರು ನಗರಸಭೆ ಅಧಿಕಾರಿಗಳ ಕಾರ್ಯ ವೈಖರಿಯ ವಿರುದ್ಧ ಲೋಕಾಯುಕ್ತರಿಗೆ ಲಿಖಿತ ದೂರು ಸಲ್ಲಿಸಿದರು. </p>.<p>ನಗರದ ಸ್ವಚ್ಛತೆ ಕಾಪಾಡಲು, ಕುಡಿಯುವ ನೀರಿನ ಸೌಲಭ್ಯ ಒದಗಿಸಲು, ರಸ್ತೆಗಳ ದುರಸ್ತಿ, ಚರಂಡಿಗಳ ಸ್ವಚ್ಛತೆ, ಕಸ ವಿಲೇವಾರಿ, ಉದ್ಯಾನಗಳ ನಿರ್ವಹಣೆ, ಬೀದಿದೀಪಗಳ ದುರಸ್ತಿ ಸೇರಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ನಾಗರಿಕರು ದೂರು ಸಲ್ಲಿಸಿದರು. </p>.<p>ನಗರಸಭೆಯ ಕಂದಾಯ, ಆರೋಗ್ಯ, ಹಣಕಾಸು, ಸ್ವಚ್ಛತೆ, ಇ ಸ್ವತ್ತು ವಿಲೇವಾರಿ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿನೀಡಿದ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದರು. ಈ ಸಂದರ್ಭ ಸ್ಥಳದಲ್ಲಿ ಹಾಜರಿದ್ದ ನಗರಸಭೆ ಪೌರಾಯುಕ್ತ ಎಸ್.ಎ.ರಾಮದಾಸ್ ಸಹಿತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.</p>.<p>ಇ ಸ್ವತ್ತು ವಿತರಣೆ, ಕಡತಗಳ ವಿಲೇವಾರಿ ಹಾಗೂ ನಿರ್ವಹಣೆಯಲ್ಲಿ ಗಂಭೀರವಾದ ಲೋಪ–ದೋಷಗಳು ಕಂಡುಬಂದಿದ್ದು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಬುದ್ಧ ನಗರದ ವಾಟರ್ ಟ್ಯಾಂಕ್ ಪಕ್ಕದಲ್ಲಿ ಸಾಧು ಚಾರಿಟಬಲ್ ಟ್ರಸ್ಟ್ ಹೆಸರಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಟ್ರಸ್ಟ್ ಅಧ್ಯಕ್ಷರ ಹೆಸರಿಗೆ ಖಾತೆ ಮಾಡಿಕೊಡಲಾಗಿದ್ದು ತನಿಖೆ ನಡೆಸಿ ಖಾತೆ ರದ್ದುಪಡಿಸಬೇಕು ಎಂದು ಹೋರಾಟಗಾರ ಭಾನುಪ್ರಕಾಶ್ ಮನವಿ ನೀಡಿದರು.</p>.<p>ಇದೇ ವೇಳೆ ಬುದ್ಧನಗರದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ, ಕಸ ವಿಲೇವಾರಿ ಮಾಡುವಂತೆ, ಶುಚಿತ್ವಕ್ಕೆ ಒತ್ತು ನೀಡುವಂತೆ ನಿವಾಸಿಗಳು ಮನವಿ ನೀಡಿದರು.</p>.<p>ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಲೋಹಿತ್ ಕುಮಾರ್, ಗಿರೀಶ್, ಶಶಿಕುಮಾರ್, ರವಿಕುಮಾರ್ ಇದ್ದರು.</p>. <p><strong>ಅಕ್ರಮವಾಗಿ ಇ–ಸ್ವತ್ತು</strong>: ಕ್ರಮಕ್ಕೆ ಆಗ್ರಹ ಪ್ರಗತಿ ನಗರದಲ್ಲಿ ಪರಿಶಿಷ್ಟ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಪಕ್ಕದಲ್ಲಿರುವ ಸಾರ್ವಜನಿಕ ರಸ್ತೆಗೆ ಮೀಸಲಿರಿಸಿದ ಜಾಗವನ್ನು ಡಿ.31 2022ರಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ನಗರಸಭೆಯಿಂದ ಇ–ಸ್ವತ್ತು ಮಾಡಿಕೊಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು ತನಿಖೆ ನಡೆಸಿ ಇ ಸ್ವತ್ತು ರದ್ದುಗೊಳಿಸಿ ಜಾಗವನ್ನು ಸಾರ್ವಜನಿಕ ಬಳಕೆಯ ಉದ್ದೇಶಕ್ಕೆ ನೀಡಬೇಕು. ಅಕ್ರಮವಾಗಿ ಇ–ಸ್ವತ್ತು ನೀಡಿರುವ ಅಧಿಕಾರಿಗಳು ಹಾಗೂ ಇ–ಸ್ವತ್ತು ಪಡೆದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೋರಾಟಗಾರ ಭಾನುಪ್ರಕಾಶ್ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>