<p><strong>ಚಾಮರಾಜನಗರ:</strong> ನಾಲ್ಕೈದು ತಿಂಗಳುಗಳ ಕಾಲ ಜಿಲ್ಲೆಯ ಜಾನುವಾರುಗಳನ್ನು ಕಾಡಿದ್ದ ಚರ್ಮಗಂಟು ರೋಗ ನಿಯಂತ್ರಣಕ್ಕೆ ಬಂದಿದ್ದು, ಸದ್ಯ ಜಿಲ್ಲೆಯಲ್ಲಿ ಒಂದು ಜಾನುವಾರು ಕೂಡ ಕಾಯಿಲೆಯಿಂದ ಬಳಲುತ್ತಿಲ್ಲ. </p>.<p>ಕಳೆದ ವರ್ಷದ ಅಕ್ಟೋಬರ್ನಿಂದಲೇ ಜಿಲ್ಲೆಯಲ್ಲಿ ಚರ್ಮಗಂಟು ಪ್ರಕರಣಗಳು ವರದಿಯಾಗಲು ಆರಂಭಗೊಂಡಿತ್ತು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ, ಜಿಲ್ಲೆಯ 550 ಗ್ರಾಮಗಳ ಪೈಕಿ 336 ಗ್ರಾಮಗಳಲ್ಲಿ ಪ್ರಕರಣಗಳು ವರದಿಯಾಗಿತ್ತು. </p>.<p>ಈವರೆಗೆ 7,943 ರಾಸುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. 7,518 ಜಾನುವಾರುಗಳು ಗುಣಮುಖಗೊಂಡಿದ್ದು, 430 ಮೃತಪಟ್ಟಿದ್ದವು. ಬೇಸಿಗೆ ಆರಂಭಗೊಂಡ ನಂತರ ಸೊಳ್ಳೆಗಳ ಹಾವಳಿ ಕಡಿಮೆಯಾದ ಬೆನ್ನಲ್ಲೇ ಕಾಯಿಲೆಯೂ ದೂರವಾಗಿದೆ. </p>.<p>‘ಸೊಳ್ಳೆಗಳು, ಉಣ್ಣೆಗಳ ಮೂಲಕ ‘ಕ್ಯಾಪ್ರಿ ಫಾಕ್ಸ್’ ಎಂಬ ವೈರಸ್ನ ಮೂಲಕ ಹರಡುವ ಈ ಕಾಯಿಲೆಯು ಮಳೆಗಾಲ ಮತ್ತು ಚಳಿಗಾಲದ ಅವಧಿಯಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಸಮಯದಲ್ಲಿ ನಿಂತಿರುವ ನೀರಿನಲ್ಲಿ ಸೊಳ್ಳೆಯ ಉತ್ಪತ್ತಿ ಹೆಚ್ಚಾಗುವುದರಿಂದ ರೋಗ ಹರಡುವಿಕೆಯ ವೇಗ ಹೆಚ್ಚು. ಬೇಸಿಗೆಯಲ್ಲಿ ಸೊಳ್ಳೆಗಳ ಉತ್ಪತ್ತಿ ಕಡಿಮೆಯಾಗುವುದರಿಂದ ರೋಗ ಪ್ರಸರಣದ ಪ್ರಮಾಣದ ಕಡಿಮೆ’ ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಯ ಉಪನಿರ್ದೇಶಕ ಡಾ.ಶಿವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಜಿಲ್ಲೆಯಲ್ಲಿ ಪ್ರಕರಣಗಳು ವರದಿಯಾದ ತಕ್ಷಣ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ 2,59,279 ಜಾನುವಾರುಗಳಿದ್ದು, ಈ ಪೈಕಿ 2,34,922 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಶೇ 91ರಷ್ಟು ರಾಸುಗಳಿಗೆ ಲಸಿಕೆ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p class="Subhead">ರೈತರಿಗೆ ಪರಿಹಾರ: ಚರ್ಮ ಗಂಟು ರೋಗದಿಂದಾಗಿ ರಾಸುಗಳನ್ನು ಕಳೆದುಕೊಂಡ ರೈತರಿಗೆ ಇಲಾಖೆ ಪರಿಹಾರ ನೀಡುತ್ತಿದ್ದು, ಜಿಲ್ಲೆಯಲ್ಲಿ 430 ಜಾನುವಾರುಗಳು ಮೃತಪಟ್ಟಿರುವುದರಿಂದ ಅಷ್ಟೂ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಿದೆ. </p>.<p>ರೋಗದಿಂದ ಮೃತಪಟ್ಟ ಪ್ರತಿ ಎತ್ತಿಗೆ ₹ 30 ಸಾವಿರ, ಹಸುವಿಗೆ ₹ 20 ಸಾವಿರ ಮತ್ತು ಕರುವಿಗೆ ₹ 5000 ಪರಿಹಾರ ನಿಗದಿ ಪಡಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 115 ರೈತರಿಗೆ ₹ 24.15 ಲಕ್ಷ ಪರಿಹಾರ ಮೊತ್ತವನ್ನು ನೇರವಾಗಿ ಅವರ ಖಾತೆಗೆ ಜಮಾವಣೆ ಮಾಡಲಾಗಿದೆ. </p>.<p>‘178 ಹೈನುಗಾರರಿಗೆ ₹ 33 ಲಕ್ಷ ಪರಿಹಾರ ಮಂಜೂರಾಗಿದ್ದು, ಗುರುವಾರದಿಂದ ಪಾವತಿ ಪ್ರಕ್ರಿಯೆ ಆರಂಭಿಸಿದ್ದೇವೆ. 137 ರೈತರಿಗೆ ₹ 29.55 ಲಕ್ಷ ಪರಿಹಾರ ಹಣ ಬಿಡುಗಡೆಗಾಗಿ ಪ್ರಸ್ತಾವ ಕಳುಹಿಸಲಾಗಿದೆ’ ಎಂದು ಡಾ.ಶಿವಣ್ಣ ಹೇಳಿದರು. </p>.<p class="Subhead">ಸ್ವಚ್ಛತೆ ಕಾಪಾಡಿ: ‘ಚರ್ಮಗಂಟು ರೋಗವನ್ನು ನಿಯಂತ್ರಿಸಲು ಜಾನುವಾರುಗಳನ್ನು ಕಟ್ಟಿ ಹಾಕುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ. ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.</p>.<p class="Subhead">------</p>.<p class="Subhead">ಸದ್ಯ ಜಿಲ್ಲೆಯಲ್ಲಿ ಒಂದು ಪ್ರಕರಣವೂ ಇಲ್ಲ. ರಾಸು ಕಳೆದುಕೊಂಡವರಿಗೆ ಪರಿಹಾರ ನೀಡಲಾಗುತ್ತಿದೆ. 3ನೇ ಹಂತದ ಪರಿಹಾರ ಮೊತ್ತಕ್ಕೆ ಪ್ರಸ್ತಾವ ಕಳುಹಿಸಲಾಗಿದೆ<br />ಡಾ.ಶಿವಣ್ಣ, ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಾಲ್ಕೈದು ತಿಂಗಳುಗಳ ಕಾಲ ಜಿಲ್ಲೆಯ ಜಾನುವಾರುಗಳನ್ನು ಕಾಡಿದ್ದ ಚರ್ಮಗಂಟು ರೋಗ ನಿಯಂತ್ರಣಕ್ಕೆ ಬಂದಿದ್ದು, ಸದ್ಯ ಜಿಲ್ಲೆಯಲ್ಲಿ ಒಂದು ಜಾನುವಾರು ಕೂಡ ಕಾಯಿಲೆಯಿಂದ ಬಳಲುತ್ತಿಲ್ಲ. </p>.<p>ಕಳೆದ ವರ್ಷದ ಅಕ್ಟೋಬರ್ನಿಂದಲೇ ಜಿಲ್ಲೆಯಲ್ಲಿ ಚರ್ಮಗಂಟು ಪ್ರಕರಣಗಳು ವರದಿಯಾಗಲು ಆರಂಭಗೊಂಡಿತ್ತು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ, ಜಿಲ್ಲೆಯ 550 ಗ್ರಾಮಗಳ ಪೈಕಿ 336 ಗ್ರಾಮಗಳಲ್ಲಿ ಪ್ರಕರಣಗಳು ವರದಿಯಾಗಿತ್ತು. </p>.<p>ಈವರೆಗೆ 7,943 ರಾಸುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. 7,518 ಜಾನುವಾರುಗಳು ಗುಣಮುಖಗೊಂಡಿದ್ದು, 430 ಮೃತಪಟ್ಟಿದ್ದವು. ಬೇಸಿಗೆ ಆರಂಭಗೊಂಡ ನಂತರ ಸೊಳ್ಳೆಗಳ ಹಾವಳಿ ಕಡಿಮೆಯಾದ ಬೆನ್ನಲ್ಲೇ ಕಾಯಿಲೆಯೂ ದೂರವಾಗಿದೆ. </p>.<p>‘ಸೊಳ್ಳೆಗಳು, ಉಣ್ಣೆಗಳ ಮೂಲಕ ‘ಕ್ಯಾಪ್ರಿ ಫಾಕ್ಸ್’ ಎಂಬ ವೈರಸ್ನ ಮೂಲಕ ಹರಡುವ ಈ ಕಾಯಿಲೆಯು ಮಳೆಗಾಲ ಮತ್ತು ಚಳಿಗಾಲದ ಅವಧಿಯಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಸಮಯದಲ್ಲಿ ನಿಂತಿರುವ ನೀರಿನಲ್ಲಿ ಸೊಳ್ಳೆಯ ಉತ್ಪತ್ತಿ ಹೆಚ್ಚಾಗುವುದರಿಂದ ರೋಗ ಹರಡುವಿಕೆಯ ವೇಗ ಹೆಚ್ಚು. ಬೇಸಿಗೆಯಲ್ಲಿ ಸೊಳ್ಳೆಗಳ ಉತ್ಪತ್ತಿ ಕಡಿಮೆಯಾಗುವುದರಿಂದ ರೋಗ ಪ್ರಸರಣದ ಪ್ರಮಾಣದ ಕಡಿಮೆ’ ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಯ ಉಪನಿರ್ದೇಶಕ ಡಾ.ಶಿವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಜಿಲ್ಲೆಯಲ್ಲಿ ಪ್ರಕರಣಗಳು ವರದಿಯಾದ ತಕ್ಷಣ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ 2,59,279 ಜಾನುವಾರುಗಳಿದ್ದು, ಈ ಪೈಕಿ 2,34,922 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಶೇ 91ರಷ್ಟು ರಾಸುಗಳಿಗೆ ಲಸಿಕೆ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p class="Subhead">ರೈತರಿಗೆ ಪರಿಹಾರ: ಚರ್ಮ ಗಂಟು ರೋಗದಿಂದಾಗಿ ರಾಸುಗಳನ್ನು ಕಳೆದುಕೊಂಡ ರೈತರಿಗೆ ಇಲಾಖೆ ಪರಿಹಾರ ನೀಡುತ್ತಿದ್ದು, ಜಿಲ್ಲೆಯಲ್ಲಿ 430 ಜಾನುವಾರುಗಳು ಮೃತಪಟ್ಟಿರುವುದರಿಂದ ಅಷ್ಟೂ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಿದೆ. </p>.<p>ರೋಗದಿಂದ ಮೃತಪಟ್ಟ ಪ್ರತಿ ಎತ್ತಿಗೆ ₹ 30 ಸಾವಿರ, ಹಸುವಿಗೆ ₹ 20 ಸಾವಿರ ಮತ್ತು ಕರುವಿಗೆ ₹ 5000 ಪರಿಹಾರ ನಿಗದಿ ಪಡಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 115 ರೈತರಿಗೆ ₹ 24.15 ಲಕ್ಷ ಪರಿಹಾರ ಮೊತ್ತವನ್ನು ನೇರವಾಗಿ ಅವರ ಖಾತೆಗೆ ಜಮಾವಣೆ ಮಾಡಲಾಗಿದೆ. </p>.<p>‘178 ಹೈನುಗಾರರಿಗೆ ₹ 33 ಲಕ್ಷ ಪರಿಹಾರ ಮಂಜೂರಾಗಿದ್ದು, ಗುರುವಾರದಿಂದ ಪಾವತಿ ಪ್ರಕ್ರಿಯೆ ಆರಂಭಿಸಿದ್ದೇವೆ. 137 ರೈತರಿಗೆ ₹ 29.55 ಲಕ್ಷ ಪರಿಹಾರ ಹಣ ಬಿಡುಗಡೆಗಾಗಿ ಪ್ರಸ್ತಾವ ಕಳುಹಿಸಲಾಗಿದೆ’ ಎಂದು ಡಾ.ಶಿವಣ್ಣ ಹೇಳಿದರು. </p>.<p class="Subhead">ಸ್ವಚ್ಛತೆ ಕಾಪಾಡಿ: ‘ಚರ್ಮಗಂಟು ರೋಗವನ್ನು ನಿಯಂತ್ರಿಸಲು ಜಾನುವಾರುಗಳನ್ನು ಕಟ್ಟಿ ಹಾಕುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ. ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.</p>.<p class="Subhead">------</p>.<p class="Subhead">ಸದ್ಯ ಜಿಲ್ಲೆಯಲ್ಲಿ ಒಂದು ಪ್ರಕರಣವೂ ಇಲ್ಲ. ರಾಸು ಕಳೆದುಕೊಂಡವರಿಗೆ ಪರಿಹಾರ ನೀಡಲಾಗುತ್ತಿದೆ. 3ನೇ ಹಂತದ ಪರಿಹಾರ ಮೊತ್ತಕ್ಕೆ ಪ್ರಸ್ತಾವ ಕಳುಹಿಸಲಾಗಿದೆ<br />ಡಾ.ಶಿವಣ್ಣ, ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>