ಚಾಮರಾಜನಗರ: ಸಿವಿಲ್ ನ್ಯಾಯಾಧೀಶರಾಗಿ ನಗರದ ರಾಮಸಮುದ್ರದ ಮಧುಶ್ರೀ ಆಯ್ಕೆಯಾಗಿದ್ದಾರೆ.
ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಎರಡು ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯನ್ನು ಎರಡನೇ ಬಾರಿಗೆ ಎದುರಿಸುವ ಮೂಲಕ ಈಗ ನ್ಯಾಯಾಧೀಶರಾಗಿ ಆಯ್ಕೆಯಾಗಿದರು.
ಮೊದಲನೇ ಬಾರಿಯು ಸಹ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಂದರ್ಶನದಲ್ಲಿ ಹಿನ್ನಡೆ ಹೊಂದಿದ್ದರು. ಆದರೂ, ಎರಡನೇ ಬಾರಿ ಮತ್ತೆ ಪ್ರಯತ್ನಿಸಿ ಈಗ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.