ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಲಾಡು ತಯಾರಿಕಾ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿಯುತ್ತಿದೆ. ಅದೃಷ್ಟವಶಾತ್ ಜೀವ ಹಾನಿಯಾಗಿಲ್ಲ.
ಕೇಂದ್ರದಲ್ಲಿದ್ದ ಒಂದು ಸಿಲಿಂಡರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುವ ಒಳಗಾಗಿ, ಬೆಂಕಿ ಇತರೆಡೆಗೆ ಹರಡಿದೆ.
‘ಕೊಠಡಿಯಲ್ಲಿ ಎಣ್ಣೆ ಹಾಗೂ ಜಿಡ್ಡಿನ ಅಂಶ ಇದ್ದುದರಿಂದ ಬೆಂಕಿ ವೇಗವಾಗಿ ವ್ಯಾಪಿಸಿದೆ’ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಪ್ರಾಧಿಕಾರದ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ.