<p><strong>ಮಹದೇಶ್ವರ ಬೆಟ್ಟ:</strong> ಈಶ್ವರಿ ಸೋಷಿಯಲ್ ಟ್ರಸ್ಟ್ ಸಂಸ್ಥೆ ಹಮ್ಮಿಕೊಂಡಿದ್ದ ವನಮಹೋತ್ಸವದಲ್ಲಿ ಮಲೆಮಹದೇಶ್ವರ ಸ್ವಾಮಿ ಬೆಟ್ಟದ ಮುಖ್ಯರಸ್ತೆ ಬದಿಯಲ್ಲಿ 100 ಸಾಲುಗಿಡಗಳನ್ನು ನೆಡಲಾಯಿತು.</p>.<p>ಸಾಲೂರು ಬೃಹನ್ಮಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಗಿಡ ನೆಟ್ಟು ನೀರೆರೆದು ಸಾಲುಗಿಡಗಳ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p> ಸ್ವಾಮೀಜಿ ಮಾತನಾಡಿ, ‘ಬೆಟ್ಟಕ್ಕೆ ಬರುವಂತಹ ಭಕ್ತರಿಗೆ ಅನುಕೂಲವಾಗಲೆಂದು ಸಾಲುಮರದ ವೆಂಕಟೇಶ್ ಅವರು ಹಮ್ಮಿ ಕೊಂಡಿರುವ ಪರಿಸರ ಕಾಯಕ ಮೆಚ್ಚುವಂಥದ್ದು , ಗಿಡಗಳು ಬೆಳೆದು ಶ್ರೀಕ್ಷೇತ್ರವು ಹಚ್ಚ ಹಸಿರಿನಿಂದ ಕಂಗೊಳಿಸಲಿ’ ಎಂದು ಆಶಿಸಿದರು.</p>.<p> ಟ್ರಸ್ಟ್ ಸಂಸ್ಥಾಪಕ ಸಿ.ಎಂ.ವೆಂಕಟೇಶ್ ಮಾತನಾಡಿ, ಎಲ್ಲ ಕಡೆ ಸಾಲು ಗಿಡಗಳನ್ನು ಆಗಾಗ್ಗೆ ನೆಟ್ಟು ಪೋಷಣೆ ಉತ್ತಮ. ಬೆಟ್ಟದಲ್ಲಿ ನಮ್ಮ ಟ್ರಸ್ಟ್ 300 ಸಾಲು ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತಿದೆ. ಈಗ 100 ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಮಲೆ ಮಹದೇಶ್ವರ ಕ್ಷೇತರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಮಾತನಾಡಿ, ಕ್ಷೇತ್ರದಲ್ಲಿ ಹೆಚ್ಚು ಸಾಲು ಗಿಡಗಳನ್ನು ನೆಡುವುದರಿಂ ಭಕ್ತರಿಗೆ ನೆರಳನ್ನು ನೀಡುವಂತಾಗುತ್ತದೆ. ಸಾಲು ಗಿಡಗಳನ್ನು ಪೋಷಣೆ ಮಾಡುತ್ತಿರುವ ವೆಂಕಟೇಶ್ ಅವರಿಗೆ ಪ್ರಾಧಿಕಾರದಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.</p>.<p> ಪ್ರಾಧಿಕಾರ ಉಪಕಾರ್ಯದರ್ಶಿ ಚಂದ್ರಶೇಖರ್, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತರು ಸ್ವಾಮಿ ಪೊನ್ನಾಚಿ, ರವಿಕುಮಾರ್, ಎ. ಸುಬ್ರಹ್ಮಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ:</strong> ಈಶ್ವರಿ ಸೋಷಿಯಲ್ ಟ್ರಸ್ಟ್ ಸಂಸ್ಥೆ ಹಮ್ಮಿಕೊಂಡಿದ್ದ ವನಮಹೋತ್ಸವದಲ್ಲಿ ಮಲೆಮಹದೇಶ್ವರ ಸ್ವಾಮಿ ಬೆಟ್ಟದ ಮುಖ್ಯರಸ್ತೆ ಬದಿಯಲ್ಲಿ 100 ಸಾಲುಗಿಡಗಳನ್ನು ನೆಡಲಾಯಿತು.</p>.<p>ಸಾಲೂರು ಬೃಹನ್ಮಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಗಿಡ ನೆಟ್ಟು ನೀರೆರೆದು ಸಾಲುಗಿಡಗಳ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p> ಸ್ವಾಮೀಜಿ ಮಾತನಾಡಿ, ‘ಬೆಟ್ಟಕ್ಕೆ ಬರುವಂತಹ ಭಕ್ತರಿಗೆ ಅನುಕೂಲವಾಗಲೆಂದು ಸಾಲುಮರದ ವೆಂಕಟೇಶ್ ಅವರು ಹಮ್ಮಿ ಕೊಂಡಿರುವ ಪರಿಸರ ಕಾಯಕ ಮೆಚ್ಚುವಂಥದ್ದು , ಗಿಡಗಳು ಬೆಳೆದು ಶ್ರೀಕ್ಷೇತ್ರವು ಹಚ್ಚ ಹಸಿರಿನಿಂದ ಕಂಗೊಳಿಸಲಿ’ ಎಂದು ಆಶಿಸಿದರು.</p>.<p> ಟ್ರಸ್ಟ್ ಸಂಸ್ಥಾಪಕ ಸಿ.ಎಂ.ವೆಂಕಟೇಶ್ ಮಾತನಾಡಿ, ಎಲ್ಲ ಕಡೆ ಸಾಲು ಗಿಡಗಳನ್ನು ಆಗಾಗ್ಗೆ ನೆಟ್ಟು ಪೋಷಣೆ ಉತ್ತಮ. ಬೆಟ್ಟದಲ್ಲಿ ನಮ್ಮ ಟ್ರಸ್ಟ್ 300 ಸಾಲು ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತಿದೆ. ಈಗ 100 ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಮಲೆ ಮಹದೇಶ್ವರ ಕ್ಷೇತರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಮಾತನಾಡಿ, ಕ್ಷೇತ್ರದಲ್ಲಿ ಹೆಚ್ಚು ಸಾಲು ಗಿಡಗಳನ್ನು ನೆಡುವುದರಿಂ ಭಕ್ತರಿಗೆ ನೆರಳನ್ನು ನೀಡುವಂತಾಗುತ್ತದೆ. ಸಾಲು ಗಿಡಗಳನ್ನು ಪೋಷಣೆ ಮಾಡುತ್ತಿರುವ ವೆಂಕಟೇಶ್ ಅವರಿಗೆ ಪ್ರಾಧಿಕಾರದಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.</p>.<p> ಪ್ರಾಧಿಕಾರ ಉಪಕಾರ್ಯದರ್ಶಿ ಚಂದ್ರಶೇಖರ್, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತರು ಸ್ವಾಮಿ ಪೊನ್ನಾಚಿ, ರವಿಕುಮಾರ್, ಎ. ಸುಬ್ರಹ್ಮಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>