ವೆಂಕಟರಮಣ, ಗೋವಿಂದ, ಗೋವಿಂದ ಎಂದು ಜಯ ಘೋಷಣೆ ಕೂಗುತ್ತ ರಥವನ್ನು ದೇವಸ್ಥಾನದ ಒಂದು ಸುತ್ತು ಎಳೆದರು. ನೂರಾರು ಮಂದಿ ನವ ಜೋಡಿಗಳು ಹಾಗೂ ಭಕ್ತಾದಿಗಳು ತೇರಿಗೆ ಹಣ್ಣು-ಜವನ ಎಸೆದು ಭಕ್ತಿ ಸಮರ್ಪಿಸಿದರು. ಹರಕೆ ಹೊತ್ತ ಭಕ್ತರು ಬೆಟ್ಟದ ತಪ್ಪಲು, ಬೆಟ್ಟದ ಮೇಲೆ ಭಕ್ತರಿಗೆ ಉಪಾಹಾರ, ಪಾನಕ, ಮಜ್ಜಿಗೆಯನ್ನು ವಿತರಿಸಿದರು.