ಮಹದೇಶ್ವರ ಬೆಟ್ಟ: ನಾಪತ್ತೆಯಾಗಿದ್ದಮಲೆಮಹದೇಶ್ವರ ಸ್ವಾಮಿ ದೇವಾಲಯದ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಯ ಕರಡಿಗೆ ರಾಜಗೋಪುರದ ಮುಂಭಾಗ ಕಸ ಹಾಕುವ ಜಾಗದಲ್ಲಿ ಗುರುವಾರ ಪತ್ತೆಯಾಗಿದೆ.
ಮಧ್ಯಾಹ್ಯ 3.45ರ ಸುಮಾರಿಗೆ ದೇವಾಲಯದ ಹೊರಗುತ್ತಿಗೆ ನೌಕರ ಸುನೀಲ್ ಕುಮಾರ್ ಎಂಬುವವರಿಗೆ ಕರಡಿಗೆ ಸಿಕ್ಕಿದೆ.
ತಕ್ಷಣ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಬೆಟ್ಟ ಠಾಣೆ ಇನ್ ಸ್ಪೆಕ್ಟರ್ ರಮೇಶ್, ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
'ದೇವರಿಗೆ ಧರಿಸಿದ್ದ ಚಿನ್ನದ ಕರಡಿಗೆಯು ತ್ಯಾಜ್ಯ ವಸ್ತು ಮಧ್ಯೆ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡು ಮಹಜರು ಮಾಡುತ್ತಿದ್ದು ನಂತರ ದೇವಾಲಯಕ್ಕೆ ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ' ಎಂದು ಜಯವಿಭವಸ್ವಾಮಿ ಹೇಳಿದ್ದಾರೆ.