<p><strong>ಮಹದೇಶ್ವರ ಬೆಟ್ಟ (ಚಾಮರಾಜನಗರ): </strong>ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆಯ ಅಂಗವಾಗಿ ಮಹದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಬುಧವಾರ ಬೆಳಿಗ್ಗೆ ವಿಜೃಂಭಣೆಯಿಂದ ನಡೆಯಿತು.</p>.<p>ಜಿಲ್ಲೆ, ಹೊರಜಿಲ್ಲೆಗಳು, ನೆರೆಯ ತಮಿಳುನಾಡಿನಿಂದ ಬಂದಿದ್ದ ಸಾವಿರಾರು ಭಕ್ತರು ಮಾದಪ್ಪನ ರಥೋತ್ಸವವನ್ನು ಕಣ್ತುಂಬಿಕೊಂಡರು.</p>.<p>ರಥೋತ್ಸವದ ಅಂಗವಾಗಿ ಬುಧವಾರ ಮುಂಜಾನೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.</p>.<p>ಮಹದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಿದ ಬಳಿಕ, ಅಲಂಕೃತ ತೇರಿನಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಬೇಡಗಂಪಣ ಸಮುದಾಯದ 108 ಹೆಣ್ಣುಮಕ್ಕಳು ಸ್ವಾಮಿಗೆ ಬೆಲ್ಲದ ಆರತಿ ಬೆಳಗಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಬೆಳಿಗ್ಗೆ 10.16ಕ್ಕೆ ರಥೋತ್ಸವ ಆರಂಭವಾಯಿತು. ನೂರಾರು ಭಕ್ತರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ದೇವಾಲಯದ ಸುತ್ತ ಒಂದು ಬಾರಿ ತೇರನ್ನು ಎಳೆದರು. </p>.<p>ದೇವಾಲಯದ ಆವರಣದಲ್ಲಿ ಕಿಕ್ಕಿರಿದು ಸೇರಿದ್ದ ಭಕ್ತರು ನಾಣ್ಯ, ಹಣ್ಣು ಧವಸವನ್ನು ತೇರಿಗೆ ಎಸೆದು ಹರಕೆ ತೀರಿಸಿದರು. 'ಉಘೇ ಉಘೇ ಮಾದಪ್ಪ' 'ಮಾಯ್ಕಾರ ಮಾದಪ್ಪನಿಗೆ ಉಘೇ' ಎಂಬ ಘೋಷಣೆಗಳು ಬೆಟ್ಟದಾದ್ಯಂತ ಮಾರ್ದನಿಸಿತು.</p>.<p>ಮಹಾರಥೋತ್ಸವ ಜರುಗಿದ ಬಳಿಕ ಪಲ್ಲಕ್ಕಿ ಉತ್ಸವ ನಡೆಯಿತು. </p>.<p>ಭಕ್ತರು ಹುಲಿವಾಹನ, ರುದ್ರಾಕ್ಷಿ ಮಂಟಪ, ಬಸವವಾಹನ ಸೇವೆಗಳನ್ನು ನೆರವೇರಿಸಿ, ಪಂಜಿನ ಸೇವೆ, ಉರುಳುಸೇವೆ, ಆಲಾಂಬಾಡಿ ಬಸವೇಶ್ವರನ ಬೆಣ್ಣೆ ಸೇವೆಯನ್ನು ನೆರವೇರಿಸಿದರು.</p>.<p> ರಥೋತ್ಸವದೊಂದಿಗೆ ಮಹದೇಶ್ಬರ ಸ್ವಾಮಿಯ ಯುಗಾದಿ ಜಾತ್ರೋತ್ಸವಕ್ಕೆ ತೆರೆ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ (ಚಾಮರಾಜನಗರ): </strong>ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆಯ ಅಂಗವಾಗಿ ಮಹದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಬುಧವಾರ ಬೆಳಿಗ್ಗೆ ವಿಜೃಂಭಣೆಯಿಂದ ನಡೆಯಿತು.</p>.<p>ಜಿಲ್ಲೆ, ಹೊರಜಿಲ್ಲೆಗಳು, ನೆರೆಯ ತಮಿಳುನಾಡಿನಿಂದ ಬಂದಿದ್ದ ಸಾವಿರಾರು ಭಕ್ತರು ಮಾದಪ್ಪನ ರಥೋತ್ಸವವನ್ನು ಕಣ್ತುಂಬಿಕೊಂಡರು.</p>.<p>ರಥೋತ್ಸವದ ಅಂಗವಾಗಿ ಬುಧವಾರ ಮುಂಜಾನೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.</p>.<p>ಮಹದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಿದ ಬಳಿಕ, ಅಲಂಕೃತ ತೇರಿನಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಬೇಡಗಂಪಣ ಸಮುದಾಯದ 108 ಹೆಣ್ಣುಮಕ್ಕಳು ಸ್ವಾಮಿಗೆ ಬೆಲ್ಲದ ಆರತಿ ಬೆಳಗಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಬೆಳಿಗ್ಗೆ 10.16ಕ್ಕೆ ರಥೋತ್ಸವ ಆರಂಭವಾಯಿತು. ನೂರಾರು ಭಕ್ತರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ದೇವಾಲಯದ ಸುತ್ತ ಒಂದು ಬಾರಿ ತೇರನ್ನು ಎಳೆದರು. </p>.<p>ದೇವಾಲಯದ ಆವರಣದಲ್ಲಿ ಕಿಕ್ಕಿರಿದು ಸೇರಿದ್ದ ಭಕ್ತರು ನಾಣ್ಯ, ಹಣ್ಣು ಧವಸವನ್ನು ತೇರಿಗೆ ಎಸೆದು ಹರಕೆ ತೀರಿಸಿದರು. 'ಉಘೇ ಉಘೇ ಮಾದಪ್ಪ' 'ಮಾಯ್ಕಾರ ಮಾದಪ್ಪನಿಗೆ ಉಘೇ' ಎಂಬ ಘೋಷಣೆಗಳು ಬೆಟ್ಟದಾದ್ಯಂತ ಮಾರ್ದನಿಸಿತು.</p>.<p>ಮಹಾರಥೋತ್ಸವ ಜರುಗಿದ ಬಳಿಕ ಪಲ್ಲಕ್ಕಿ ಉತ್ಸವ ನಡೆಯಿತು. </p>.<p>ಭಕ್ತರು ಹುಲಿವಾಹನ, ರುದ್ರಾಕ್ಷಿ ಮಂಟಪ, ಬಸವವಾಹನ ಸೇವೆಗಳನ್ನು ನೆರವೇರಿಸಿ, ಪಂಜಿನ ಸೇವೆ, ಉರುಳುಸೇವೆ, ಆಲಾಂಬಾಡಿ ಬಸವೇಶ್ವರನ ಬೆಣ್ಣೆ ಸೇವೆಯನ್ನು ನೆರವೇರಿಸಿದರು.</p>.<p> ರಥೋತ್ಸವದೊಂದಿಗೆ ಮಹದೇಶ್ಬರ ಸ್ವಾಮಿಯ ಯುಗಾದಿ ಜಾತ್ರೋತ್ಸವಕ್ಕೆ ತೆರೆ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>