ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಮಾದಪ್ಪನ ಆದಾಯಕ್ಕೆ ಕೋವಿಡ್‌ ಹೊಡೆತ

ಮಹದೇಶ್ವರ ಬೆಟ್ಟ ಎರಡೂವರೆ ತಿಂಗಳಲ್ಲಿ ಹುಂಡಿಗೆ ಬಿದ್ದಿದ್ದು ₹1.47 ಕೋಟಿ ಕಾಣಿಕೆ
Last Updated 18 ಸೆಪ್ಟೆಂಬರ್ 2020, 16:01 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಕೋವಿಡ್‌–19 ಹಾವಳಿ ಇಲ್ಲಿನ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರದ ಆದಾಯದ ಮೇಲೂ ತೀವ್ರ ಪರಿಣಾಮ ಬೀರಿದೆ.

ಜೂನ್‌ 27ರಿಂದ ಸೆಪ್ಟೆಂಬರ್‌ 17ರವರೆಗಿನ, 82 ದಿನಗಳ ಅವಧಿಯಲ್ಲಿ ದೇವಾಲಯದ ಹುಂಡಿಗಳಲ್ಲಿ ₹1.47 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಲಾಕ್‌ಡೌನ್‌ಗಿಂತಲೂ ಮೊದಲು ಪ್ರತಿ ತಿಂಗಳು ₹1.5 ಕೋಟಿಯಷ್ಟು ಹಣ ಹುಂಡಿಗಳಲ್ಲಿ ಸಂಗ್ರಹವಾಗುತ್ತಿತ್ತು.

ಜೂನ್‌ 26ರಂದು ನಡೆದ ಬಳಿಕ, ಶುಕ್ರವಾರಸಾಲೂರು ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಬಸ್ ನಿಲ್ದಾಣದಲ್ಲಿರುವ ವಾಣೀಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

ನೋಟುಗಳ ರೂಪದಲ್ಲಿ ₹1,40,60,447 ಕಾಣಿಕೆ ಬಂದಿದ್ದರೆ, ನಾಣ್ಯದ ರೂಪದಲ್ಲಿ ₹6,53,901 ಸಂಗ್ರಹವಾಗಿದೆ. ಭಕ್ತರು 17 ಗ್ರಾಂ ಚಿನ್ನ, 985 ಗ್ರಾಂ ಬೆಳ್ಳಿ ವಸ್ತುಗಳನ್ನೂ ಹುಂಡಿಗಳಿಗೆ ಕಾಣಿಕೆ ಹಾಕಿದ್ದಾರೆ.

ಸ್ಥಳದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪಕಾರ್ಯದರ್ಶಿ ಬಸವರಾಜು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT