<p><strong>ಹನೂರು (ಚಾಮರಾಜನಗರ ಜಿಲ್ಲೆ):</strong> ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಲಾಗಿದೆ.</p>.<p>ಕೊಳ್ಳೇಗಾಲದ ಜೆಎಂಎಫ್ಸಿ ಕೋರ್ಟ್ನಿಂದ ಸೋಮವಾರ ಅನುಮತಿ ಪಡೆದು, ಆರೋಪಿಗಳಾದ ಪಚ್ಚಮಲ್ಲು, ಗಣೇಶ್, ಸಂಪು ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ತಲೆಮರೆಸಿಕೊಂಡಿರುವ ಇತರರಿಗೆ ಶೋಧ ನಡೆದಿದೆ.</p>.<p>‘ತ್ವರಿತವಾಗಿ ಆರೋಪಪಟ್ಟಿ ಸಲ್ಲಿಸಲು ಸೂಚಿಸಲಾಗಿದೆ. ಸಿಬ್ಬಂದಿ ನಿರ್ಲಕ್ಷ್ಯ ಅಥವಾ ಕರ್ತವ್ಯ ಲೋಪ ಎಸಗಿದ್ದರೆ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಜರುಗಿಸಲಾಗುವುದು. ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ’ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.</p>.<p>‘ಕಾಡಿನಂಚು ಮತ್ತು ಕಾಡಿನಲ್ಲಿರುವ ಹಾಡಿಗಳಲ್ಲಿರುವ ಜನರ ಆರ್ಥಿಕ ಅಭಿವೃದ್ಧಿಗೆ ಕ್ರಮವಹಿಸಲು ವನ್ಯಜೀವಿಗಳೊಂದಿಗೆ ಸಹಬಾಳ್ವೆಗೆ ಉತ್ತೇಜನ ಕುರಿತು ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು (ಚಾಮರಾಜನಗರ ಜಿಲ್ಲೆ):</strong> ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಲಾಗಿದೆ.</p>.<p>ಕೊಳ್ಳೇಗಾಲದ ಜೆಎಂಎಫ್ಸಿ ಕೋರ್ಟ್ನಿಂದ ಸೋಮವಾರ ಅನುಮತಿ ಪಡೆದು, ಆರೋಪಿಗಳಾದ ಪಚ್ಚಮಲ್ಲು, ಗಣೇಶ್, ಸಂಪು ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ತಲೆಮರೆಸಿಕೊಂಡಿರುವ ಇತರರಿಗೆ ಶೋಧ ನಡೆದಿದೆ.</p>.<p>‘ತ್ವರಿತವಾಗಿ ಆರೋಪಪಟ್ಟಿ ಸಲ್ಲಿಸಲು ಸೂಚಿಸಲಾಗಿದೆ. ಸಿಬ್ಬಂದಿ ನಿರ್ಲಕ್ಷ್ಯ ಅಥವಾ ಕರ್ತವ್ಯ ಲೋಪ ಎಸಗಿದ್ದರೆ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಜರುಗಿಸಲಾಗುವುದು. ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ’ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.</p>.<p>‘ಕಾಡಿನಂಚು ಮತ್ತು ಕಾಡಿನಲ್ಲಿರುವ ಹಾಡಿಗಳಲ್ಲಿರುವ ಜನರ ಆರ್ಥಿಕ ಅಭಿವೃದ್ಧಿಗೆ ಕ್ರಮವಹಿಸಲು ವನ್ಯಜೀವಿಗಳೊಂದಿಗೆ ಸಹಬಾಳ್ವೆಗೆ ಉತ್ತೇಜನ ಕುರಿತು ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>