<p><strong>ಚಾಮರಾಜನಗರ</strong>: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವಲಯd ಕಣ್ಣೂರು ಬೀಟ್ನ ಕುರುಬನ ಕೆರೆ ಬಳಿ ಗಂಡು ಹುಲಿಯ ಕಳೇಬರ ಪತ್ತೆಯಾಗಿರುವುದು ತಡವಾಗಿ ಗೊತ್ತಾಗಿದೆ.</p>.<p>ಶನಿವಾರ (ಡಿ.17) ಹುಲಿಯ ಕಳೇಬರ ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದೆ. ಹುಲಿಗೆ 5ರಿಂದ 7ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. 2020ರಲ್ಲಿ ಆ ಪ್ರದೇಶದಲ್ಲಿ ಈ ಹುಲಿಯನ್ನು ಗುರುತಿಸಲಾಗಿತ್ತು.</p>.<p>‘ಹುಲಿಯ ಉಗುರುಗಳು, ಹಲ್ಲುಗಳು ಎಲ್ಲವೂ ಇವೆ. ಮುಖಕ್ಕೂ ಗಾಯಗಳಾಗಿವೆ. ಒಂದು ಕಣ್ಣು ಹೊರಗಡೆ ಬಂದಿದೆ. ಇನ್ನೊಂದು ಹುಲಿಯೊಂದಿಗೆ ನಡೆಸಿದ ಕಾದಾಟದಲ್ಲಿ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ದೇಹದ ಅಂಗಾಂಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಇನ್ನೂ ಬಂದಿಲ್ಲ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕಿ, ಡಿಸಿಎಫ್ ದೀಪ್ ಜೆ. ಕಾಂಟ್ರಾಕ್ಟರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವಲಯd ಕಣ್ಣೂರು ಬೀಟ್ನ ಕುರುಬನ ಕೆರೆ ಬಳಿ ಗಂಡು ಹುಲಿಯ ಕಳೇಬರ ಪತ್ತೆಯಾಗಿರುವುದು ತಡವಾಗಿ ಗೊತ್ತಾಗಿದೆ.</p>.<p>ಶನಿವಾರ (ಡಿ.17) ಹುಲಿಯ ಕಳೇಬರ ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದೆ. ಹುಲಿಗೆ 5ರಿಂದ 7ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. 2020ರಲ್ಲಿ ಆ ಪ್ರದೇಶದಲ್ಲಿ ಈ ಹುಲಿಯನ್ನು ಗುರುತಿಸಲಾಗಿತ್ತು.</p>.<p>‘ಹುಲಿಯ ಉಗುರುಗಳು, ಹಲ್ಲುಗಳು ಎಲ್ಲವೂ ಇವೆ. ಮುಖಕ್ಕೂ ಗಾಯಗಳಾಗಿವೆ. ಒಂದು ಕಣ್ಣು ಹೊರಗಡೆ ಬಂದಿದೆ. ಇನ್ನೊಂದು ಹುಲಿಯೊಂದಿಗೆ ನಡೆಸಿದ ಕಾದಾಟದಲ್ಲಿ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ದೇಹದ ಅಂಗಾಂಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಇನ್ನೂ ಬಂದಿಲ್ಲ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕಿ, ಡಿಸಿಎಫ್ ದೀಪ್ ಜೆ. ಕಾಂಟ್ರಾಕ್ಟರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>