ಎರಡು ಮೂರು ದಿನಗಳಿಂದ ಕಸಪಾದ ಹಿರಿಯ ಸದಸ್ಯರು, ಆತ್ಮೀಯರೊಂದಿಗೆ ಚರ್ಚಿಸಿದ ಬಳಿಕ ಸ್ಪರ್ಧಿಸಲು ಅವರು ಒಲವು ತೋರಿದರು ಎಂದು ತಿಳಿದು ಬಂದಿದೆ. ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಆಯೋಜಿಸಬೇಕು ಮತ್ತು ಕನ್ನಡ ಸಾಹಿತ್ಯ ಭವನವನ್ನು ನಿರ್ಮಾಣ ಮಾಡಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಅವರು ಸ್ಪರ್ಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.