ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯದ ಮೀಣ್ಯಂ ಗ್ರಾಮದ ತೋಟದ ಮನೆಯೊಂದರಲ್ಲಿ ಏಳು ಕೆಜಿಯಷ್ಟು ಕಡವೆ ಒಣಮಾಂಸವನ್ನು ಸಂಗ್ರಹಿಸಿಟ್ಟಿದ್ದ ಗೋವಿಂದ ಎಂಬುವವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹೂಗ್ಯಂ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಗೋವಿಂದ ಅವರ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಕಡವೆಯ ಒಣಮಾಂಸ ಇರುವುದು ಪತ್ತೆಯಾಗಿದೆ. ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.