<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಗುರುವಾರ ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ಸ್ಥಳೀಯ ನಿವಾಸಿ ಸಣ್ಣಮಾದ (72) ಮೃತಪಟ್ಟಿದ್ದಾರೆ. </p><p>ಗ್ರಾಮವು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕರಳಕಟ್ಟೆ ಗ್ರಾಮಕ್ಕೆ ಕಾಡಾನೆಯೊಂದು ಬಂದಿದೆ. ಸಣ್ಣಮಾದ ಅವರು ಪತ್ನಿ ಜಡೆ ಮಾದಮ್ಮ, ನಾದಿನಿ ರಂಗಮ್ಮ ಜೊತೆ ಮೇಗಲದೊಡ್ಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾರಿ ಮಧ್ಯೆ ನಿಂತಿತ್ತು. ಆನೆಯಿಂದ ತಪ್ಪಿಸಿಕೊಳ್ಳಲು ಸಣ್ಣಮಾದ ಸೇರಿದಂತೆ ಮೂವರೂ ಓಡಿದರು. </p><p>ಸಣ್ಣ ಮಾದ ಅವರನ್ನು ಅಟ್ಟಿಸಿದ ಆನೆ ದಾಳಿ ಮಾಡಿದೆ. ಜಡೆ ಮಾದಮ್ಮ ಮತ್ತು ರಂಗಮ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪಾರಾಗಿದ್ದಾರೆ. </p><p>ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ನಂದಕುಮಾರ್, ಡಿಆರ್ಎಫ್ಒ ಮಹೇಶ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಗಣೇಶ್ ಭೇಟಿ ನೀಡಿ ಪರಿಶೀಲಿಸಿದರು.</p><p><strong>ಪರಿಹಾರಕ್ಕೆ ಒತ್ತಾಯ: </strong>ಎಸಿಎಫ್ ನಂದಕುಮಾರ್ ಭೇಟಿ ನೀಡಿದ ವೇಳೆ ಗ್ರಾಮಸ್ಥರು, ಸಣ್ಣ ಮಾದ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದರು. </p><p>‘ಕರಳಕಟ್ಟೆ ಗ್ರಾಮವು ಕಾಡಿನ ಅಂಚಿನಲ್ಲಿರುವುದ್ದರಿಂದ ಗ್ರಾಮಸ್ಥರಿಗೆ ರಕ್ಷಣೆ ಇಲ್ಲದಂತಾಗಿದೆ. ಒಂದು ತಿಂಗಳಿನಿಂದ ಎರಡು ಆನೆಗಳು ಗ್ರಾಮಕ್ಕೆ ಬರುತ್ತಿವೆ. ಜಿಂಕೆ, ಕಾಡು ಹಂದಿಗಳು ಬೆಳೆಯನ್ನು ಹಾಳು ಮಾಡುತ್ತಿವೆ. ಈ ಬಗ್ಗೆ ಅರಣ್ಯ ಸಿಬ್ಬಂದಿ ಹಲವು ಬಾರಿ ಮಾಹಿತಿ ನೀಡಿದ್ದರೂ ಕ್ರಮವಹಿಸಲಿಲ್ಲ’ ಎಂದು ದೂರಿದರು. </p><p>ಎಸಿಎಫ್ ನಂದಕುಮಾರ್ ಮಾತನಾಡಿ, ‘ಇಲಾಖೆಯಿಂದ ಸಿಗುವ ಪರಿಹಾರ ಮತ್ತು ಸೌಲಭ್ಯಗಳನ್ನು ಸಣ್ಣಮಾದ ಅವರ ಕುಟುಂಬಕ್ಕೆ ಸಿಗುವಂತೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಗುರುವಾರ ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ಸ್ಥಳೀಯ ನಿವಾಸಿ ಸಣ್ಣಮಾದ (72) ಮೃತಪಟ್ಟಿದ್ದಾರೆ. </p><p>ಗ್ರಾಮವು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕರಳಕಟ್ಟೆ ಗ್ರಾಮಕ್ಕೆ ಕಾಡಾನೆಯೊಂದು ಬಂದಿದೆ. ಸಣ್ಣಮಾದ ಅವರು ಪತ್ನಿ ಜಡೆ ಮಾದಮ್ಮ, ನಾದಿನಿ ರಂಗಮ್ಮ ಜೊತೆ ಮೇಗಲದೊಡ್ಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾರಿ ಮಧ್ಯೆ ನಿಂತಿತ್ತು. ಆನೆಯಿಂದ ತಪ್ಪಿಸಿಕೊಳ್ಳಲು ಸಣ್ಣಮಾದ ಸೇರಿದಂತೆ ಮೂವರೂ ಓಡಿದರು. </p><p>ಸಣ್ಣ ಮಾದ ಅವರನ್ನು ಅಟ್ಟಿಸಿದ ಆನೆ ದಾಳಿ ಮಾಡಿದೆ. ಜಡೆ ಮಾದಮ್ಮ ಮತ್ತು ರಂಗಮ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪಾರಾಗಿದ್ದಾರೆ. </p><p>ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ನಂದಕುಮಾರ್, ಡಿಆರ್ಎಫ್ಒ ಮಹೇಶ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಗಣೇಶ್ ಭೇಟಿ ನೀಡಿ ಪರಿಶೀಲಿಸಿದರು.</p><p><strong>ಪರಿಹಾರಕ್ಕೆ ಒತ್ತಾಯ: </strong>ಎಸಿಎಫ್ ನಂದಕುಮಾರ್ ಭೇಟಿ ನೀಡಿದ ವೇಳೆ ಗ್ರಾಮಸ್ಥರು, ಸಣ್ಣ ಮಾದ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದರು. </p><p>‘ಕರಳಕಟ್ಟೆ ಗ್ರಾಮವು ಕಾಡಿನ ಅಂಚಿನಲ್ಲಿರುವುದ್ದರಿಂದ ಗ್ರಾಮಸ್ಥರಿಗೆ ರಕ್ಷಣೆ ಇಲ್ಲದಂತಾಗಿದೆ. ಒಂದು ತಿಂಗಳಿನಿಂದ ಎರಡು ಆನೆಗಳು ಗ್ರಾಮಕ್ಕೆ ಬರುತ್ತಿವೆ. ಜಿಂಕೆ, ಕಾಡು ಹಂದಿಗಳು ಬೆಳೆಯನ್ನು ಹಾಳು ಮಾಡುತ್ತಿವೆ. ಈ ಬಗ್ಗೆ ಅರಣ್ಯ ಸಿಬ್ಬಂದಿ ಹಲವು ಬಾರಿ ಮಾಹಿತಿ ನೀಡಿದ್ದರೂ ಕ್ರಮವಹಿಸಲಿಲ್ಲ’ ಎಂದು ದೂರಿದರು. </p><p>ಎಸಿಎಫ್ ನಂದಕುಮಾರ್ ಮಾತನಾಡಿ, ‘ಇಲಾಖೆಯಿಂದ ಸಿಗುವ ಪರಿಹಾರ ಮತ್ತು ಸೌಲಭ್ಯಗಳನ್ನು ಸಣ್ಣಮಾದ ಅವರ ಕುಟುಂಬಕ್ಕೆ ಸಿಗುವಂತೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>