<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಯಡಕುರಿಯಾ ಗ್ರಾಮದ ಸೇತುವೆ ಮೇಲಿಂದ ಬುಧವಾರ ಆಯತಪ್ಪಿ ಕಾವೇರಿ ನದಿಗೆ ಬಿದ್ದ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.<br><br>ತಮಿಳುನಾಡು ಮೂಲದ ಧರ್ಮಪುರಿ ಜಿಲ್ಲೆಯ ಗಣೇಶ್(35) ಮೃತರು. ತಮಿಳುನಾಡಿನಿಂದ ಕಬ್ಬು ಕಟಾವು ಮಾಡಲು ಬಂದಿದ್ದರು. ಈ ವೇಳೆ ಯಡಕುರಿಯಾ ಸೇತುವೆ ಮೇಲಿಂದ ನೀರನ್ನು ನೋಡುತ್ತಾ ಇದ್ದಾಗ ಆಯಾತಪ್ಪಿ ನದಿಗೆ ಬಿದ್ದಿದ್ದಾರೆ.<br><br>ತಕ್ಷಣ ಅಲ್ಲೇ ಇದ್ದ ಕೂಲಿ–ಕಾರ್ಮಿಕರು ಗಣೇಶ್ಅವರನ್ನು ಮೇಲೆತ್ತಿ ಆಂಬೆಲೆನ್ಸ್ನಲ್ಲಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.<br><br>ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದಾರೆ. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಯಡಕುರಿಯಾ ಗ್ರಾಮದ ಸೇತುವೆ ಮೇಲಿಂದ ಬುಧವಾರ ಆಯತಪ್ಪಿ ಕಾವೇರಿ ನದಿಗೆ ಬಿದ್ದ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.<br><br>ತಮಿಳುನಾಡು ಮೂಲದ ಧರ್ಮಪುರಿ ಜಿಲ್ಲೆಯ ಗಣೇಶ್(35) ಮೃತರು. ತಮಿಳುನಾಡಿನಿಂದ ಕಬ್ಬು ಕಟಾವು ಮಾಡಲು ಬಂದಿದ್ದರು. ಈ ವೇಳೆ ಯಡಕುರಿಯಾ ಸೇತುವೆ ಮೇಲಿಂದ ನೀರನ್ನು ನೋಡುತ್ತಾ ಇದ್ದಾಗ ಆಯಾತಪ್ಪಿ ನದಿಗೆ ಬಿದ್ದಿದ್ದಾರೆ.<br><br>ತಕ್ಷಣ ಅಲ್ಲೇ ಇದ್ದ ಕೂಲಿ–ಕಾರ್ಮಿಕರು ಗಣೇಶ್ಅವರನ್ನು ಮೇಲೆತ್ತಿ ಆಂಬೆಲೆನ್ಸ್ನಲ್ಲಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.<br><br>ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದಾರೆ. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>