<p><strong>ಚಾಮರಾಜನಗರ:</strong> 12 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ, ಆಕೆಯನ್ನು ಅಪಹರಣ ಮಾಡಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ ಯುವಕನಿಗೆ ಇಲ್ಲಿನ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.</p><p>ತಾಲ್ಲೂಕಿನ ಬಂಡಿಗೆರೆಯ ನಾಗೇಂದ್ರ (23) ಶಿಕ್ಷೆಗೆ ಗುರಿಯಾದ ಯುವಕ. 2021ರ ಸೆಪ್ಟೆಂಬರ್ 13ರಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p><p>ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ, ಅಪಹರಣ ಮಾಡಿದ್ದ ನಾಗೇಂದ್ರ, ಆಕೆ ಬಾಲಕಿ ಎಂದು ಗೊತ್ತಿದ್ದರೂ, ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ ಎಂದು ಆರೋಪಿಸಲಾಗಿತ್ತು. </p><p>ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಅಂದಿನ ಇನ್ಸ್ಪೆಕ್ಟರ್ ಎಂ.ಎಲ್.ಶೇಖರ್ ಅವರು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು. </p><p>ಆರೋಪಗಳು ಸಾಬೀತಾದ್ದರಿಂದ ನ್ಯಾಯಾಧೀಶರಾದ ನಿಶಾರಾಣಿ ಅವರು, ನಾಗೇಂದ್ರನಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದ್ದಾರೆ.</p><p>ಜೊತೆಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸಂತ್ರಸ್ತೆಗೆ ₹ 4 ಲಕ್ಷ ಪರಿಹಾರವನ್ನು 30 ದಿನಗಳ ಒಳಗಾಗಿ ನೀಡಬೇಕು ಎಂದೂ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> 12 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ, ಆಕೆಯನ್ನು ಅಪಹರಣ ಮಾಡಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ ಯುವಕನಿಗೆ ಇಲ್ಲಿನ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.</p><p>ತಾಲ್ಲೂಕಿನ ಬಂಡಿಗೆರೆಯ ನಾಗೇಂದ್ರ (23) ಶಿಕ್ಷೆಗೆ ಗುರಿಯಾದ ಯುವಕ. 2021ರ ಸೆಪ್ಟೆಂಬರ್ 13ರಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p><p>ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ, ಅಪಹರಣ ಮಾಡಿದ್ದ ನಾಗೇಂದ್ರ, ಆಕೆ ಬಾಲಕಿ ಎಂದು ಗೊತ್ತಿದ್ದರೂ, ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ ಎಂದು ಆರೋಪಿಸಲಾಗಿತ್ತು. </p><p>ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಅಂದಿನ ಇನ್ಸ್ಪೆಕ್ಟರ್ ಎಂ.ಎಲ್.ಶೇಖರ್ ಅವರು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು. </p><p>ಆರೋಪಗಳು ಸಾಬೀತಾದ್ದರಿಂದ ನ್ಯಾಯಾಧೀಶರಾದ ನಿಶಾರಾಣಿ ಅವರು, ನಾಗೇಂದ್ರನಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದ್ದಾರೆ.</p><p>ಜೊತೆಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸಂತ್ರಸ್ತೆಗೆ ₹ 4 ಲಕ್ಷ ಪರಿಹಾರವನ್ನು 30 ದಿನಗಳ ಒಳಗಾಗಿ ನೀಡಬೇಕು ಎಂದೂ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>