ಬಸವರಾಜ ಅವರು ಎರಡು ಮೂರು ಬಾರಿ ಬೈಕ್ನಲ್ಲಿ ಅಪಘಾತವಾಗಿತ್ತು. ಆ ಕಾರಣ ವೈದ್ಯರ ಸಲಹೆಯಂತೆ ಪಿಸಿಯೋಥೆರಪಿ ಮಾಡಿಸಿಕೊಳ್ಳಲು ಕೊಳ್ಳೇಗಾಲಕ್ಕೆ ತಮ್ಮ ವಿವೇಕ್ ಆರಾಧ್ಯರ ಜೊತೆ ನಿತ್ಯವೂ ಬರುತ್ತಿದ್ದರು. ಶನಿವಾರ ದಾಸನಪುರ ಗ್ರಾಮದ ಸೇತುವೆ ಮೇಲೆ ಬೈಕ್ನಲ್ಲಿ ಬರುತ್ತಿದ್ದ ವೇಳೆ, ಬಸವರಾಜ ಅವರು ‘ವಾಂತಿ ಬರುತ್ತಿದೆ. ಬೈಕ್ ನಿಲ್ಲಿಸು’ ಎಂದು ತಮ್ಮನಿಗೆ ಹೇಳಿದ್ದಾರೆ. ಆಗ ಇದ್ದಕ್ಕಿದಂತೆ ಬಸವರಾಜ ಆರಾಧ್ಯ ಸೇತುವೆ ಮೇಲಿಂದ ಕಾವೇರಿ ನದಿಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.