ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆ ಮಹದೇಶ್ವರ ವನ್ಯಧಾಮ: ಕಾಡಾನೆಗೆ ವ್ಯಕ್ತಿ ಬಲಿ

Last Updated 7 ನವೆಂಬರ್ 2019, 15:11 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದಲ್ಲಿ ಗುರುವಾರ ಕಾಡಾನೆ ದಾಳಿಗೆ ತುತ್ತಾಗಿ ಕೀರನಹೊಲ ಗ್ರಾಮದ ಮಹಾದೇವ (45) ಎಂಬುವವರು ಮೃತಪಟ್ಟಿದ್ದಾರೆ.

ಮಹಾದೇವ ಅವರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ವನ್ಯಧಾಮದ ಒಳಗಡೆ ಇರುವ ಶನೇಶ್ವರ ದೇವಾಲಯಕ್ಕೆ ಸಂಜೆ 5.30ರ ಸುಮಾರಿಗೆ ತೆರಳುತ್ತಿದ್ದ ಸಂದರ್ಭದಲ್ಲಿಎರಕೆಯಂ ಹಳ್ಳದ ಬಳಿ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಇಬ್ಬರು ಸ್ನೇಹಿತರು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಾದೇವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ಅವರು ಭೇಟಿ ನೀಡಿ ಪರಿಶೀಲಿಸಿದರು. ಮಹಾದೇವ ಅವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಕೊಡುವ ಭರವಸೆಯನ್ನು ಅವರು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT