<p><strong>ಚಾಮರಾಜನಗರ</strong>: ಗಣೇಶನ ಹಬ್ಬಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇರುವಂತೆಯೇ ಹೂವಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಏರುಮುಖವಾಗಿದೆ.</p>.<p>ಶ್ರಾವಣ ಮಾಸದ ಆರಂಭದಿಂದಲೂ ಹೂವಿನ ಧಾರಣೆ ಏರುತ್ತಿದ್ದು, ಈ ವಾರಾಂತ್ಯದಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದೇ 22ರಂದು ಆದಿತ್ಯವಾರ ಗಣೇಶನ ಹಬ್ಬ ಇದೆ.</p>.<p>ಬಿಡಿ ಹೂವಿನ ಮಾರುಕಟ್ಟೆಯಲ್ಲಿ ಕೆಜಿ ಕನಕಾಂಬರಕ್ಕೆ 1,000, ಮಲ್ಲಿಗೆ ಕೆಜಿಗೆ ₹240ರಿಂದ ₹280 ಇದೆ. ಕಾಕಡದ ದರ ₹200ರಿಂದ ₹240, ಚೆಂಡು ಹೂ ಹಳದಿ ಬಣ್ಣದ್ದಕ್ಕೆ ₹40, ಕೆಂಪು ಬಣ್ಣದ ಹೂವಿಗೆ ₹20 ಇದೆ. ಸುಗಂಧರಾಜಕ್ಕೆ ₹100–₹160ರವರೆಗೂ ಬೆಲೆ ಇದೆ.</p>.<p>‘ಸಾಮಾನ್ಯವಾಗಿ ಆಷಾಢ ಮಾಸ ಮುಗಿದು, ಶ್ರಾವಣ ಮಾಸದಲ್ಲಿ ಹೂವುಗಳಿಗೆ ಬೇಡಿಕೆ ಹೆಚ್ಚಿರುತ್ತದೆ. ಇನ್ನೀಗ ಹಬ್ಬಗಳು ಸಾಲು ಸಾಲಾಗಿರುವುದರಿಂದ ಬೇಡಿಕೆ ಬಂದಿದೆ. ಹಾಗಾಗಿ ಬೆಲೆಯೂ ಏರಿಕೆ ಕಂಡಿದೆ’ ಎಂದು ಬಿಡಿ ಹೂವಿನ ವ್ಯಾಪಾರಿ ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತರಕಾರಿಗಳ ಪೈಕಿ ಬೀನ್ಸ್ ಬೆಲೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಹಾಪ್ಕಾಮ್ಸ್ನಲ್ಲಿ ₹25–₹30ರಷ್ಟಿದ್ದ ಬೀನ್ಸ್ ಬೆಲೆ ಈ ವಾರ ₹50ಕ್ಕೆ ಏರಿದೆ.</p>.<p>‘ಮಾರುಕಟ್ಟೆಗೆ ಬೀನ್ಸ್ನ ಆವಕದ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಬೆಲೆಯಲ್ಲಿ ಏರಿಕೆಯಾಗಿದೆ’ ಎಂದು ಹಾಪ್ಕಾಮ್ಸ್ ವ್ಯಾಪಾರಿ ಮಧು ಅವರು ಹೇಳಿದರು.</p>.<p>ಎರಡು ವಾರಗಳ ಹಿಂದೆ ಕೆಜಿಗೆ ₹15 ಇದ್ದ ಟೊಮೆಟೊ ಧಾರಣೆ, ಈ ವಾರ ₹25ಕ್ಕೆ ಹೆಚ್ಚಿದೆ. ಉಳಿದ ತರಕಾರಿಗಳ ಬೆಲೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ.</p>.<p>ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಲೆ ಹೆಚ್ಚಳ ಸಾಧ್ಯತೆಯನ್ನು ವ್ಯಾಪಾರಿಗಳು ತಳ್ಳಿ ಹಾಕುತ್ತಿಲ್ಲ.</p>.<p>ಹಣ್ಣುಗಳ ಪೈಕಿ ಸೇಬಿನ ಬೆಲೆ ಕೆಜಿಗೆ ₹20ರಷ್ಟು, ಮೂಸಂಬಿ ₹10ರಷ್ಟು ಕಡಿಮೆಯಾಗಿದೆ. ಏಲಕ್ಕಿ ಹಾಗೂ ಪಚ್ಚೆ ಬಾಳೆ ಬೆಲೆ ಕೆಜಿಗೆ ಕ್ರಮವಾಗಿ ₹50 ಮತ್ತು ₹25ರಿಂದ–₹30ರವರೆಗೆ ಇದೆ. ಹಬ್ಬಕ್ಕೆ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ.</p>.<p>ಮಾಂಸದ ಮಾರುಕಟ್ಟೆಯಲ್ಲಿ ಮೊಟ್ಟೆ, ಚಿಕನ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಗಣೇಶನ ಹಬ್ಬಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇರುವಂತೆಯೇ ಹೂವಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಏರುಮುಖವಾಗಿದೆ.</p>.<p>ಶ್ರಾವಣ ಮಾಸದ ಆರಂಭದಿಂದಲೂ ಹೂವಿನ ಧಾರಣೆ ಏರುತ್ತಿದ್ದು, ಈ ವಾರಾಂತ್ಯದಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದೇ 22ರಂದು ಆದಿತ್ಯವಾರ ಗಣೇಶನ ಹಬ್ಬ ಇದೆ.</p>.<p>ಬಿಡಿ ಹೂವಿನ ಮಾರುಕಟ್ಟೆಯಲ್ಲಿ ಕೆಜಿ ಕನಕಾಂಬರಕ್ಕೆ 1,000, ಮಲ್ಲಿಗೆ ಕೆಜಿಗೆ ₹240ರಿಂದ ₹280 ಇದೆ. ಕಾಕಡದ ದರ ₹200ರಿಂದ ₹240, ಚೆಂಡು ಹೂ ಹಳದಿ ಬಣ್ಣದ್ದಕ್ಕೆ ₹40, ಕೆಂಪು ಬಣ್ಣದ ಹೂವಿಗೆ ₹20 ಇದೆ. ಸುಗಂಧರಾಜಕ್ಕೆ ₹100–₹160ರವರೆಗೂ ಬೆಲೆ ಇದೆ.</p>.<p>‘ಸಾಮಾನ್ಯವಾಗಿ ಆಷಾಢ ಮಾಸ ಮುಗಿದು, ಶ್ರಾವಣ ಮಾಸದಲ್ಲಿ ಹೂವುಗಳಿಗೆ ಬೇಡಿಕೆ ಹೆಚ್ಚಿರುತ್ತದೆ. ಇನ್ನೀಗ ಹಬ್ಬಗಳು ಸಾಲು ಸಾಲಾಗಿರುವುದರಿಂದ ಬೇಡಿಕೆ ಬಂದಿದೆ. ಹಾಗಾಗಿ ಬೆಲೆಯೂ ಏರಿಕೆ ಕಂಡಿದೆ’ ಎಂದು ಬಿಡಿ ಹೂವಿನ ವ್ಯಾಪಾರಿ ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತರಕಾರಿಗಳ ಪೈಕಿ ಬೀನ್ಸ್ ಬೆಲೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಹಾಪ್ಕಾಮ್ಸ್ನಲ್ಲಿ ₹25–₹30ರಷ್ಟಿದ್ದ ಬೀನ್ಸ್ ಬೆಲೆ ಈ ವಾರ ₹50ಕ್ಕೆ ಏರಿದೆ.</p>.<p>‘ಮಾರುಕಟ್ಟೆಗೆ ಬೀನ್ಸ್ನ ಆವಕದ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಬೆಲೆಯಲ್ಲಿ ಏರಿಕೆಯಾಗಿದೆ’ ಎಂದು ಹಾಪ್ಕಾಮ್ಸ್ ವ್ಯಾಪಾರಿ ಮಧು ಅವರು ಹೇಳಿದರು.</p>.<p>ಎರಡು ವಾರಗಳ ಹಿಂದೆ ಕೆಜಿಗೆ ₹15 ಇದ್ದ ಟೊಮೆಟೊ ಧಾರಣೆ, ಈ ವಾರ ₹25ಕ್ಕೆ ಹೆಚ್ಚಿದೆ. ಉಳಿದ ತರಕಾರಿಗಳ ಬೆಲೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ.</p>.<p>ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಲೆ ಹೆಚ್ಚಳ ಸಾಧ್ಯತೆಯನ್ನು ವ್ಯಾಪಾರಿಗಳು ತಳ್ಳಿ ಹಾಕುತ್ತಿಲ್ಲ.</p>.<p>ಹಣ್ಣುಗಳ ಪೈಕಿ ಸೇಬಿನ ಬೆಲೆ ಕೆಜಿಗೆ ₹20ರಷ್ಟು, ಮೂಸಂಬಿ ₹10ರಷ್ಟು ಕಡಿಮೆಯಾಗಿದೆ. ಏಲಕ್ಕಿ ಹಾಗೂ ಪಚ್ಚೆ ಬಾಳೆ ಬೆಲೆ ಕೆಜಿಗೆ ಕ್ರಮವಾಗಿ ₹50 ಮತ್ತು ₹25ರಿಂದ–₹30ರವರೆಗೆ ಇದೆ. ಹಬ್ಬಕ್ಕೆ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ.</p>.<p>ಮಾಂಸದ ಮಾರುಕಟ್ಟೆಯಲ್ಲಿ ಮೊಟ್ಟೆ, ಚಿಕನ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>