<p><strong>ಚಾಮರಾಜನಗರ: </strong>ಮಾರುಕಟ್ಟೆಯಲ್ಲಿ ಹೂವಿನ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ.ಗೌರಿ ಗಣೇಶನ ಹಬ್ಬದ ನಂತರ ವಾರದಿಂದ ವಾರಕ್ಕೆ ಬೆಲೆ ಕುಸಿಯುತ್ತಾ ಬಂದಿದೆ.</p>.<p>ಕಳೆದ ವಾರ ಬಿಡಿ ಹೂವಿನ ಮಾರುಕಟ್ಟೆಯಲ್ಲಿ ₹500–₹600ರಷ್ಟಿದ್ದ ಕೆಜಿ ಕನಕಾಂಬರದ ಬೆಲೆ ಈ ವಾರ ₹200ಕ್ಕೆ ಇಳಿದಿದೆ.</p>.<p>ಮಲ್ಲಿಗೆ ಬೆಲೆ ₹200ಕ್ಕೆ ಕುಸಿದಿದೆ. ₹160 ಇದ್ದ ಕಾಕಡದ ಬೆಲೆ ₹40–₹50ಕ್ಕೆ ಇಳಿಕೆಯಾಗಿದೆ. ಚೆಂಡು ಹೂವು ಕೆಜಿಗೆ ₹5ರಿಂದ ₹10 ಇದೆ.</p>.<p>‘ಪಿತೃಪಕ್ಷದ ಕಾರಣದಿಂದ ಹೂವುಗಳಿಗೆ ಬೇಡಿಕೆ ಇಲ್ಲ. ಹಾಗಾಗಿ, ಬೆಲೆ ಕಡಿಮೆಯಾಗಿದೆ. ದಸರಾ ವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಬಿಡಿಹೂವಿನ ವ್ಯಾಪಾರಿ ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತರಕಾರಿ ಮಾರುಕಟ್ಟೆಯಲ್ಲಿ ಕಾಯಿ ಪಲ್ಲೆಗಳ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಹಾಪ್ಕಾಮ್ಸ್ನಲ್ಲಿ ಟೊಮೆಟೊ (₹30–₹35), ಕ್ಯಾರೆಟ್ (₹30), ಬೀನ್ಸ್ (₹60), ಈರುಳ್ಳಿ (₹25) ಸೇರಿದಂತೆ ಎಲ್ಲ ತರಕಾರಿಗಳ ಬೆಲೆ ಕಳೆದ ವಾರದಷ್ಟೇ ಇದೆ.</p>.<p>ಹಣ್ಣುಗಳ ಧಾರಣೆಯಲ್ಲೂ ಯಥಾಸ್ಥಿತಿ ಮುಂದುವರಿದೆ.</p>.<p>‘ಎರಡು ವಾರಗಳಿಂದ ತರಕಾರಿ ಹಾಗೂ ಹಣ್ಣುಗಳ ಬೆಲೆ ಸ್ಥಿರವಾಗಿದೆ. ಇನ್ನೂ ಕೆಲವು ದಿನ ಇದೇ ದರಗಳು ಮುಂದುವರಿಯುವ ಸಾಧ್ಯತೆ ಇದೆ’ ಎಂದು ಹಾಪ್ಕಾಮ್ಸ್ ವ್ಯಾಪಾರಿ ಮಧು ಹೇಳಿದರು.</p>.<p>ಮಾಂಸ ಮಾರುಕಟ್ಟೆಯಲ್ಲಿ ಚಿಕನ್ ಬೆಲೆಯಲ್ಲಿ ₹10ರಿಂದ ₹30ರಷ್ಟು ಹೆಚ್ಚಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಮಾರುಕಟ್ಟೆಯಲ್ಲಿ ಹೂವಿನ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ.ಗೌರಿ ಗಣೇಶನ ಹಬ್ಬದ ನಂತರ ವಾರದಿಂದ ವಾರಕ್ಕೆ ಬೆಲೆ ಕುಸಿಯುತ್ತಾ ಬಂದಿದೆ.</p>.<p>ಕಳೆದ ವಾರ ಬಿಡಿ ಹೂವಿನ ಮಾರುಕಟ್ಟೆಯಲ್ಲಿ ₹500–₹600ರಷ್ಟಿದ್ದ ಕೆಜಿ ಕನಕಾಂಬರದ ಬೆಲೆ ಈ ವಾರ ₹200ಕ್ಕೆ ಇಳಿದಿದೆ.</p>.<p>ಮಲ್ಲಿಗೆ ಬೆಲೆ ₹200ಕ್ಕೆ ಕುಸಿದಿದೆ. ₹160 ಇದ್ದ ಕಾಕಡದ ಬೆಲೆ ₹40–₹50ಕ್ಕೆ ಇಳಿಕೆಯಾಗಿದೆ. ಚೆಂಡು ಹೂವು ಕೆಜಿಗೆ ₹5ರಿಂದ ₹10 ಇದೆ.</p>.<p>‘ಪಿತೃಪಕ್ಷದ ಕಾರಣದಿಂದ ಹೂವುಗಳಿಗೆ ಬೇಡಿಕೆ ಇಲ್ಲ. ಹಾಗಾಗಿ, ಬೆಲೆ ಕಡಿಮೆಯಾಗಿದೆ. ದಸರಾ ವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಬಿಡಿಹೂವಿನ ವ್ಯಾಪಾರಿ ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತರಕಾರಿ ಮಾರುಕಟ್ಟೆಯಲ್ಲಿ ಕಾಯಿ ಪಲ್ಲೆಗಳ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಹಾಪ್ಕಾಮ್ಸ್ನಲ್ಲಿ ಟೊಮೆಟೊ (₹30–₹35), ಕ್ಯಾರೆಟ್ (₹30), ಬೀನ್ಸ್ (₹60), ಈರುಳ್ಳಿ (₹25) ಸೇರಿದಂತೆ ಎಲ್ಲ ತರಕಾರಿಗಳ ಬೆಲೆ ಕಳೆದ ವಾರದಷ್ಟೇ ಇದೆ.</p>.<p>ಹಣ್ಣುಗಳ ಧಾರಣೆಯಲ್ಲೂ ಯಥಾಸ್ಥಿತಿ ಮುಂದುವರಿದೆ.</p>.<p>‘ಎರಡು ವಾರಗಳಿಂದ ತರಕಾರಿ ಹಾಗೂ ಹಣ್ಣುಗಳ ಬೆಲೆ ಸ್ಥಿರವಾಗಿದೆ. ಇನ್ನೂ ಕೆಲವು ದಿನ ಇದೇ ದರಗಳು ಮುಂದುವರಿಯುವ ಸಾಧ್ಯತೆ ಇದೆ’ ಎಂದು ಹಾಪ್ಕಾಮ್ಸ್ ವ್ಯಾಪಾರಿ ಮಧು ಹೇಳಿದರು.</p>.<p>ಮಾಂಸ ಮಾರುಕಟ್ಟೆಯಲ್ಲಿ ಚಿಕನ್ ಬೆಲೆಯಲ್ಲಿ ₹10ರಿಂದ ₹30ರಷ್ಟು ಹೆಚ್ಚಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>