‘ಮುಷ್ಕರ ನಡೆಸುವಂತೆ ನಮಗೂ ಸೂಚನೆ ಬಂದಿದೆ. ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಆದರೆ, ನಮ್ಮಲ್ಲಿ ದೊಡ್ಡ ಆಸ್ಪತ್ರೆಗಳು ಇಲ್ಲದಿರುವುದರಿಂದ ಹೊರ ರೋಗಿ ವಿಭಾಗ ಹಾಗೂ ತುರ್ತು ವಿಭಾಗ ಎಂಬ ಪ್ರತ್ಯೇಕ ವಿಭಾಗಗಳಿಲ್ಲ. ಹಾಗಾಗಿ ರೋಗಿಗಳು ಬಂದರೆ ಚಿಕಿತ್ಸೆ ನೀಡಲೇಬೇಕಾಗುತ್ತದೆ. ಸಾಂಕೇತಿಕವಾಗಿ ಮುಷ್ಕರ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಿದ್ದೇವೆ’ ಎಂದು ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಸವರಾಜೇಂದ್ರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.