<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ)</strong>: ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.ಮೇಕೆದಾಟು ಯೋಜನೆ: ₹9 ಸಾವಿರ ಕೋಟಿಯ ಡಿಪಿಆರ್ ಸಲ್ಲಿಕೆ.<p>ಜೀರ್ಣೋದ್ಧಾರಗೊಂಡಿರುವ ಮಧ್ಯರಂಗನಾಥ ಸ್ವಾಮಿ ದೇಗುಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ ಮಾತನಾಡಿ, ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ದೊರೆತ ಬಳಿಕ ಭೂಮಿ ಪೂಜೆ ಮಾಡಲಾಗುವುದು, ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲಾಗುವುದು ಎಂದರು.</p><p>ಮೇಕೆದಾಟು ಯೋಜನೆಗೆ ಆಕ್ಷೇಪ ಸಲ್ಲಿಸಲು ತಮಿಳುನಾಡಿಗೆ ಹಕ್ಕಿಲ್ಲ, ಕೇಂದ್ರದ ಜಲ ಆಯೋಗ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ, ತಮಿಳುನಾಡಿಗೆ 177 ಟಿಎಂಸಿ ಕಾವೇರಿ ನೀರು ಬಿಡಬೇಕು ಎಂಬ ಸ್ಪಷ್ಟ ಆದೇಶ ಇದ್ದು ಮುಂದೆ ಚರ್ಚಿಸಲಾಗುವುದು ಎಂದರು.</p><p>ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬಿದ್ದು ಕೊಟ್ಟ ಮಾತಿನಂತೆ ನಡೆದಿದ್ದೇವೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡಿದ್ದೇವೆ, ಆಸ್ತಿಯ ದಾಖಲೆಗಳಲ್ಲಿ ಮಾಲೀಕರ ಹಾಗೂ ಸ್ವತ್ತಿನ ಫೋಟೋ ಹಾಕಿ ಪ್ರತಿ ಮನೆಗೆ ಖಾತೆ ನೀಡುತ್ತಿದ್ದೇವೆ, ಯಾವ ಸರ್ಕಾರ ಮಾಡದ ಕೆಲಸವನ್ನು ಕಾಂಗ್ರೆಸ್ ಮಾಡಿದ್ದು ಜನರ ಋಣ ತೀರಿಸುತ್ತಿದೆ. ಉಳಿದಿರುವ 2 ವರ್ಷಗಳಲ್ಲಿ ಇನ್ನು ಹೆಚ್ಚಿನ ಕೆಲಸ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.</p>.ಹತ್ತು ದಿನದಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್: ಡಿ.ಕೆ. ಶಿವಕುಮಾರ್.<p>ಕಳೆದ ಎರಡು ವರ್ಷ ಉತ್ತಮ ಮಳೆಯಾಗಿತ್ತು, ಈ ವರ್ಷ ಮಳೆ ಕೊರತೆಯಾದರೆ ರೈತರ ನೆರವಿಗೆ ಧಾವಿಸುವ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಚರ್ಚೆ ಮಾಡುತ್ತಿದ್ದೇವೆ ಎಂದರು. ಚಾಮರಾಜನಗರ ಜಿಲ್ಲೆಗೆ ಭೇಟಿನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೌಢ್ಯವಷ್ಟೆ, ಐತಿಹಾಸಿಕ, ಧಾರ್ಮಿಕ, ಪ್ರಾಕೃತಿಕ ಸಂಪತ್ತು ಹೊಂದಿರುವ ಕಾವೇರಿ ನದಿ ತೀರದಲ್ಲಿರುವ ಪುಣ್ಯಭೂಮಿಯಲ್ಲಿ ಭಕ್ತಿ ಹಾಗೂ ಭಗವಂತ ನೆಲೆಸಿದ್ದಾನೆ, ಮಲೆ ಮಹದೇಶ್ವರ, ಮಧ್ಯರಂಗನಾಥ, ಸಿದ್ದಪ್ಪಾಜಿ, ಹಿಮವದ್ ಗೋಪಾಲಸ್ವಾಮಿ ಪುಣ್ಯಕ್ಷೇತ್ರಗಳಿಗೆ ನಾಡಿನ ಜನರು ಭೇಟಿನೀಡಿ ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ ಎಂದರು.</p><p>ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಈ ಭಾಗದ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ, ಕೈಗಾರಿಕೆಗಳನ್ನು ಸ್ಥಾಪಿಸಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.</p><h2>ಜಿಬಿಎ ಚುನಾವಣೆಗೆ ಸಿದ್ಧತೆ:</h2><p>ಜಿಬಿಎ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದ್ದು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ, ನಿಗದಿಯಂತೆ ಚುನಾವಣೆ ನಡೆಯಲಿದ್ದು ಪಕ್ಷ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದ ಡಿಕೆಶಿ ‘ಮುಖ್ಯಮಂತ್ರಿ ಯಾವಾಗ ಆಗಬೇಕು ಎಂಬುದನ್ನು ಕಾಲವೇ ತೀರ್ಮಾನಿಸಲಿದೆ’ ಎಂದು ನುಡಿದರು.</p>.ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ಕಾಂಗ್ರೆಸ್ ಕಾರಣ: ದೇವೇಗೌಡ ಕುಟುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ)</strong>: ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.ಮೇಕೆದಾಟು ಯೋಜನೆ: ₹9 ಸಾವಿರ ಕೋಟಿಯ ಡಿಪಿಆರ್ ಸಲ್ಲಿಕೆ.<p>ಜೀರ್ಣೋದ್ಧಾರಗೊಂಡಿರುವ ಮಧ್ಯರಂಗನಾಥ ಸ್ವಾಮಿ ದೇಗುಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ ಮಾತನಾಡಿ, ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ದೊರೆತ ಬಳಿಕ ಭೂಮಿ ಪೂಜೆ ಮಾಡಲಾಗುವುದು, ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲಾಗುವುದು ಎಂದರು.</p><p>ಮೇಕೆದಾಟು ಯೋಜನೆಗೆ ಆಕ್ಷೇಪ ಸಲ್ಲಿಸಲು ತಮಿಳುನಾಡಿಗೆ ಹಕ್ಕಿಲ್ಲ, ಕೇಂದ್ರದ ಜಲ ಆಯೋಗ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ, ತಮಿಳುನಾಡಿಗೆ 177 ಟಿಎಂಸಿ ಕಾವೇರಿ ನೀರು ಬಿಡಬೇಕು ಎಂಬ ಸ್ಪಷ್ಟ ಆದೇಶ ಇದ್ದು ಮುಂದೆ ಚರ್ಚಿಸಲಾಗುವುದು ಎಂದರು.</p><p>ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬಿದ್ದು ಕೊಟ್ಟ ಮಾತಿನಂತೆ ನಡೆದಿದ್ದೇವೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡಿದ್ದೇವೆ, ಆಸ್ತಿಯ ದಾಖಲೆಗಳಲ್ಲಿ ಮಾಲೀಕರ ಹಾಗೂ ಸ್ವತ್ತಿನ ಫೋಟೋ ಹಾಕಿ ಪ್ರತಿ ಮನೆಗೆ ಖಾತೆ ನೀಡುತ್ತಿದ್ದೇವೆ, ಯಾವ ಸರ್ಕಾರ ಮಾಡದ ಕೆಲಸವನ್ನು ಕಾಂಗ್ರೆಸ್ ಮಾಡಿದ್ದು ಜನರ ಋಣ ತೀರಿಸುತ್ತಿದೆ. ಉಳಿದಿರುವ 2 ವರ್ಷಗಳಲ್ಲಿ ಇನ್ನು ಹೆಚ್ಚಿನ ಕೆಲಸ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.</p>.ಹತ್ತು ದಿನದಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್: ಡಿ.ಕೆ. ಶಿವಕುಮಾರ್.<p>ಕಳೆದ ಎರಡು ವರ್ಷ ಉತ್ತಮ ಮಳೆಯಾಗಿತ್ತು, ಈ ವರ್ಷ ಮಳೆ ಕೊರತೆಯಾದರೆ ರೈತರ ನೆರವಿಗೆ ಧಾವಿಸುವ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಚರ್ಚೆ ಮಾಡುತ್ತಿದ್ದೇವೆ ಎಂದರು. ಚಾಮರಾಜನಗರ ಜಿಲ್ಲೆಗೆ ಭೇಟಿನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೌಢ್ಯವಷ್ಟೆ, ಐತಿಹಾಸಿಕ, ಧಾರ್ಮಿಕ, ಪ್ರಾಕೃತಿಕ ಸಂಪತ್ತು ಹೊಂದಿರುವ ಕಾವೇರಿ ನದಿ ತೀರದಲ್ಲಿರುವ ಪುಣ್ಯಭೂಮಿಯಲ್ಲಿ ಭಕ್ತಿ ಹಾಗೂ ಭಗವಂತ ನೆಲೆಸಿದ್ದಾನೆ, ಮಲೆ ಮಹದೇಶ್ವರ, ಮಧ್ಯರಂಗನಾಥ, ಸಿದ್ದಪ್ಪಾಜಿ, ಹಿಮವದ್ ಗೋಪಾಲಸ್ವಾಮಿ ಪುಣ್ಯಕ್ಷೇತ್ರಗಳಿಗೆ ನಾಡಿನ ಜನರು ಭೇಟಿನೀಡಿ ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ ಎಂದರು.</p><p>ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಈ ಭಾಗದ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ, ಕೈಗಾರಿಕೆಗಳನ್ನು ಸ್ಥಾಪಿಸಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.</p><h2>ಜಿಬಿಎ ಚುನಾವಣೆಗೆ ಸಿದ್ಧತೆ:</h2><p>ಜಿಬಿಎ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದ್ದು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ, ನಿಗದಿಯಂತೆ ಚುನಾವಣೆ ನಡೆಯಲಿದ್ದು ಪಕ್ಷ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದ ಡಿಕೆಶಿ ‘ಮುಖ್ಯಮಂತ್ರಿ ಯಾವಾಗ ಆಗಬೇಕು ಎಂಬುದನ್ನು ಕಾಲವೇ ತೀರ್ಮಾನಿಸಲಿದೆ’ ಎಂದು ನುಡಿದರು.</p>.ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ಕಾಂಗ್ರೆಸ್ ಕಾರಣ: ದೇವೇಗೌಡ ಕುಟುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>