ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಹಿಂದೆ ಕಾಂಗ್ರೆಸ್ ಸರ್ಕಾರ ಇತ್ತು, ನಂತರ ಮೈತ್ರಿ ಸರ್ಕಾರ ಬಂತು. ಆಗ ಏನೂ ಮಾಡಲಿಲ್ಲ. ಈಗ ಕಾಂಗ್ರೆಸ್ನವರು ಪಾದಯಾತ್ರೆ ಮಾಡುವುದಕ್ಕೆ ಹೊರಟಿದ್ದಾರೆ. ಇದು ರಾಜಕೀಯ ಗಿಮಿಕ್ ಎಂದು ಜಲ ಸಂಪನ್ಮೂಲ ಸಚಿವ ಕಾರಜೋಳ ಅವರು ಹೇಳಿಕೆ ನೀಡಿದ್ದಾರೆ. ‘ನನ್ನ ಬಳಿ ಮಹತ್ವದ ದಾಖಲೆಗಳಿವೆ. ಸ್ಫೋಟ ಮಾಡುತ್ತೇನೆ’ ಎಂದು ಹೇಳಿದ್ದಾರೆ. ದಾಖಲೆ ಇದ್ದರೆ ಕಾರಜೋಳ ಅವರು ಬಿಡುಗಡೆ ಮಾಡಲಿ, ರಾಜ್ಯದ ಜನರು ಅವುಗಳನ್ನು ನೋಡಲಿ’ ಎಂದು ಹೇಳಿದರು.