<p><strong>ಚಾಮರಾಜನಗರ: </strong>ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ಹೋಗುವುದಕ್ಕೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟ ನಂತರ ರಾಜ್ಯದ ವಿವಿಧ ಜಿಲ್ಲೆಗಳಿಂದ ಗಡಿ ಜಿಲ್ಲೆಗೆ ಗುರುವಾರ ತಡ ರಾತ್ರಿವರೆಗೆ 1,450 ಕಾರ್ಮಿಕರು ಬಂದಿದ್ದಾರೆ.</p>.<p>ಇವರಲ್ಲಿ ಕೊಡಗಿನ ಕಾಫಿ ಎಸ್ಟೇಟ್ಗಳಿಗೆ ಕೂಲಿ ಕೆಲಸಕ್ಕಾಗಿ ಹೋಗಿದ್ದ ಜಿಲ್ಲೆಯ ವಿವಿಧ ಪೋಡುಗಳು 450 ಕೂಲಿ ಕಾರ್ಮಿಕರು ಸೇರಿದ್ದಾರೆ. ಇದುವರೆಗೆ ಜಿಲ್ಲೆಗೆ ಬಂದವರಲ್ಲಿ ಹೆಚ್ಚಿನವರು ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಇದ್ದವರು.</p>.<p>ಆಯಾ ಜಿಲ್ಲಾಡಳಿತಗಳು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕಾರ್ಮಿಕರನ್ನು ಕಳುಹಿಸುತ್ತಿದ್ದು, ಇಲ್ಲಿನ ಜಿಲ್ಲಾಡಳಿತ ಚೆಕ್ಪೋಸ್ಟ್ಗಳಲ್ಲಿ ಅವರು ಬರಮಾಡಿಕೊಳ್ಳುತ್ತಿದೆ.</p>.<p>‘ಗುರುವಾರ ರಾತ್ರಿವರೆಗೆ 1,450 ಮಂದಿ ಬಂದಿದ್ದಾರೆ. ನಂತರವೂ ಕೆಲವು ಬಸ್ಗಳು ಬಂದಿವೆ’ ಎಂದು ಉಪವಿಭಾಗಾಧಿಕಾರಿ ಹಾಗೂ ವಲಸೆ ಕಾರ್ಮಿಕರ ಉಸ್ತುವಾರಿ ಹೊತ್ತಿರುವ ನಿಖಿತಾ ಎಂ.ಚಿನ್ನಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead"><strong>ಆರೋಗ್ಯ ತಪಾಸಣೆ</strong></p>.<p class="Subhead">‘ಚೆಕ್ಪೋಸ್ಟ್ನಲ್ಲಿ ಎಲ್ಲರನ್ನೂ ಇಳಿಸಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಬೇರೆ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ಇರಿಸಿಕೊಳ್ಳುವುದಕ್ಕಾಗಿ ಎಲ್ಲ ತಾಲ್ಲೂಕುಗಳಲ್ಲಿ ಹಾಸ್ಟೆಲ್ಗಳನ್ನು ಗುರುತಿಸಲಾಗಿದ್ದು, ಚೆಕ್ಪೋಸ್ಟ್ನಿಂದ ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ’ ಎಂದು ಅವರು ಹೇಳಿದರು.</p>.<p>‘ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡುತ್ತಿಲ್ಲ. ಯಾರಲ್ಲಾದರೂ ರೋಗ ಲಕ್ಷಣ ಕಂಡು ಬಂದರೆ, ಅಂತಹವರ ಗಂಟಲಿನ ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಅಗತ್ಯ ಬಿದ್ದರೆ ಮಾತ್ರ ಕ್ವಾರಂಟೈನ್ ಮಾಡಲಾಗುವುದು. ಇಲ್ಲದಿದ್ದರೆ ಅವರ ಊರಿಗೆ ಕಳುಹಿಸಿ ಕೊಡಲಾಗುತ್ತದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ಹೋಗುವುದಕ್ಕೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟ ನಂತರ ರಾಜ್ಯದ ವಿವಿಧ ಜಿಲ್ಲೆಗಳಿಂದ ಗಡಿ ಜಿಲ್ಲೆಗೆ ಗುರುವಾರ ತಡ ರಾತ್ರಿವರೆಗೆ 1,450 ಕಾರ್ಮಿಕರು ಬಂದಿದ್ದಾರೆ.</p>.<p>ಇವರಲ್ಲಿ ಕೊಡಗಿನ ಕಾಫಿ ಎಸ್ಟೇಟ್ಗಳಿಗೆ ಕೂಲಿ ಕೆಲಸಕ್ಕಾಗಿ ಹೋಗಿದ್ದ ಜಿಲ್ಲೆಯ ವಿವಿಧ ಪೋಡುಗಳು 450 ಕೂಲಿ ಕಾರ್ಮಿಕರು ಸೇರಿದ್ದಾರೆ. ಇದುವರೆಗೆ ಜಿಲ್ಲೆಗೆ ಬಂದವರಲ್ಲಿ ಹೆಚ್ಚಿನವರು ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಇದ್ದವರು.</p>.<p>ಆಯಾ ಜಿಲ್ಲಾಡಳಿತಗಳು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕಾರ್ಮಿಕರನ್ನು ಕಳುಹಿಸುತ್ತಿದ್ದು, ಇಲ್ಲಿನ ಜಿಲ್ಲಾಡಳಿತ ಚೆಕ್ಪೋಸ್ಟ್ಗಳಲ್ಲಿ ಅವರು ಬರಮಾಡಿಕೊಳ್ಳುತ್ತಿದೆ.</p>.<p>‘ಗುರುವಾರ ರಾತ್ರಿವರೆಗೆ 1,450 ಮಂದಿ ಬಂದಿದ್ದಾರೆ. ನಂತರವೂ ಕೆಲವು ಬಸ್ಗಳು ಬಂದಿವೆ’ ಎಂದು ಉಪವಿಭಾಗಾಧಿಕಾರಿ ಹಾಗೂ ವಲಸೆ ಕಾರ್ಮಿಕರ ಉಸ್ತುವಾರಿ ಹೊತ್ತಿರುವ ನಿಖಿತಾ ಎಂ.ಚಿನ್ನಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead"><strong>ಆರೋಗ್ಯ ತಪಾಸಣೆ</strong></p>.<p class="Subhead">‘ಚೆಕ್ಪೋಸ್ಟ್ನಲ್ಲಿ ಎಲ್ಲರನ್ನೂ ಇಳಿಸಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಬೇರೆ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ಇರಿಸಿಕೊಳ್ಳುವುದಕ್ಕಾಗಿ ಎಲ್ಲ ತಾಲ್ಲೂಕುಗಳಲ್ಲಿ ಹಾಸ್ಟೆಲ್ಗಳನ್ನು ಗುರುತಿಸಲಾಗಿದ್ದು, ಚೆಕ್ಪೋಸ್ಟ್ನಿಂದ ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ’ ಎಂದು ಅವರು ಹೇಳಿದರು.</p>.<p>‘ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡುತ್ತಿಲ್ಲ. ಯಾರಲ್ಲಾದರೂ ರೋಗ ಲಕ್ಷಣ ಕಂಡು ಬಂದರೆ, ಅಂತಹವರ ಗಂಟಲಿನ ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಅಗತ್ಯ ಬಿದ್ದರೆ ಮಾತ್ರ ಕ್ವಾರಂಟೈನ್ ಮಾಡಲಾಗುವುದು. ಇಲ್ಲದಿದ್ದರೆ ಅವರ ಊರಿಗೆ ಕಳುಹಿಸಿ ಕೊಡಲಾಗುತ್ತದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>